ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನೀಟ್​​ನಲ್ಲಿ ಕರ್ನಾಟಕಕ್ಕೆ ಫಸ್ಟ್​ ರ‍್ಯಾಂಕ್: ಗುಮ್ಮಟನಗರಿ ಹುಡುಗ

ವಿಜಯಪುರ : ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆ, ಎಷ್ಟೇ ಹಿಂದುಳಿದಿದ್ದರೂ ಜಿಲ್ಲೆಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿದ್ದಾರೆ. ಶನಿವಾರ ಪ್ರಕಟಗೊಂಡ ಅಖಿಲ ಭಾರತ ವೈದ್ಯಕೀಯ ಪ್ರವೇಶ ಪರೀಕ್ಷಾ ಫಲಿತಾಂಶದಲ್ಲಿ (NEET UG Result) ಜಿಲ್ಲೆಯ ವಿದ್ಯಾರ್ಥಿ ಕರ್ನಾಟಕಕ್ಕೆ ಮೊದಲನೇ ಸ್ಥಾನ ಗಳಿಸಿದ್ದಾರೆ. ನಗರದ ವೈದ್ಯ ದಂಪತಿಯ ಪುತ್ರ ನಿಖಿಲ್ ಸೊನ್ನದ ನೀಟ್​ ಪರೀಕ್ಷೆಯಲ್ಲಿ ಮಹತ್ವದ ಸಾಧನೆ ಮಾಡುವ ಮೂಲಕ ಜಿಲ್ಲೆ ಮತ್ತು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಅಖಿಲ ಭಾರತ ವೈದ್ಯಕೀಯ ಪ್ರವೇಶ ಪರೀಕ್ಷೆಯ ಫಲಿತಾಂಶ. ಈ ಪರೀಕ್ಷೆಯಲ್ಲಿ ಅವರ ಪುತ್ರ ನಿಖಿಲ್ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌ ಪಡೆದು ಸಾಧನೆ ಮಾಡಿದ್ದಾರೆ. ರಾಷ್ಟ್ರಮಟ್ಟದಲ್ಲಿ 17 ನೇ ರ‍್ಯಾಂಕ್‌ ಪಡೆಯುವ ಮೂಲಕ ರಾಜ್ಯ ಹಾಗೂ ಜಿಲ್ಲೆಯ ಕೀರ್ತಿ ಪತಾಕೆ ಹಾರಿಸಿದ್ದಾರೆ. ಮಗನ ಸಾಧನೆಗೆ ಇಡೀ ಕುಟುಂಬ ಸಂಸತಪಟ್ಟಿದೆ. ಮಂಗಳೂರು ವಳಚಿಲ್‌ನ ಎಕ್ಸ್‌ಫರ್ಟ್‌ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ನಿಖಿಲ್​​, ನೀಟ್​ ಪರೀಕ್ಷೆಯಲ್ಲಿ 720 ಅಂಕಗಳಿಗೆ 670 ಅಂಕ ಪಡೆದಿದ್ದಾರೆ.

ನರರೋಗ ತಜ್ಞನಾಗುವ ಆಸೆ: ನಿಖಿಲ್ ಸೊನ್ನದ

ನಿಖಿಲ್ ಸಾಧನೆ ಕುಟುಂಬಕಷ್ಟೇ ಅಲ್ಲ ಜಿಲ್ಲೆ ಹಾಗೂ ರಾಜ್ಯಕ್ಕೆ ಸಂತಸದ ಸಂಗತಿ. ನಿಖಿಲ್​​ಗೆ ಆರತಿ ಬೆಳಗಿ ಸಿಹಿ ತಿನ್ನಿಸಿ ಪೋಷಕರು ಸಂತಸ ಪಟ್ಟಿದ್ದಾರೆ. ಇದೇ ವೇಳೆ ಮಾತನಾಡಿದ ವಿದ್ಯಾರ್ಥಿ ನಿಖಿಲ್​, ಒತ್ತಡ ರಹಿತವಾಗಿ ನಿರಂತರ ಅಭ್ಯಾಸ, ಕ್ರೀಡೆ, ಸಾಹಿತ್ಯ, ಆಧ್ಯಾತ್ಮಗಳ ವಿಚಾರ ಪಠ್ಯೇತರವಾಗಿ ಅಳವಡಿಕೆ ಮಾಡಿಕೊಂಡು ಸತತ ಪರಿಶ್ರಮದಿಂದ ಅಭ್ಯಾಸ ಮಾಡಿದೆ. ಮುಂದೆ ದೆಹಲಿಯ ಏಮ್ಸ್​ನಲ್ಲಿ ಎಂಬಿಬಿಎಸ್ ಮಾಡಿ, ನಂತರ ನರರೋಗ ತಜ್ಞನಾಗುವ ಆಸೆ ಇದೆ ಎಂದು ಹೇಳಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ