
ಬೆಳಗಾವಿ / ಚಿಕ್ಕೋಡಿ ನಗರದಲ್ಲಿ ಮಾನ್ಯ ಲೋಕಸಭಾ ಸದಸ್ಯರಾದ ಕು . ಪ್ರಿಯಾಂಕಾ ಸತೀಶ ಜಾರಕಿಹೊಳಿ ಇವರ ನೇತೃತ್ವದಲ್ಲಿ ಸಂಸದರ ಸಭಾಭವನದಲ್ಲಿ ಆಯೋಜಿಸಲಾಗಿದ್ದ 2024 ಮತ್ತು 2025ರ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದುಕೊಂಡ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭ ಜರುಗಿತು. ಚಿಕ್ಕೋಡಿಯಲ್ಲಿ ವಿದ್ಯಾರ್ಥಿಗಳಿಗೆ ಅತ್ಯಂತ ಪ್ರೀತಿ-ಪೂರ್ವಕವಾಗಿ ಸನ್ಮಾನಿಸಿದ ಜನಪ್ರಿಯ ಸಂಸದರಾದ ಕು.ಪ್ರಿಯಾಂಕಾ ಜಾರಕಿಹೊಳಿ.
ಇದೇ ಭವ್ಯ ಸಮಾರಂಭದಲ್ಲಿ ಚಿಕ್ಕೋಡಿಯ ಜನಪ್ರಿಯ ಶಾಸಕರಾದ ಶ್ರೀ ಗಣೇಶ ಹುಕ್ಕೇರಿ, ಬುಡಾ ಅಧ್ಯಕ್ಷ ಶ್ರೀ ಲಕ್ಷ್ಮಣರಾವ ಚಿಂಗಳೆ, ಮುಖಂಡರಾದ ಶ್ರೀ ಮಹಾವೀರ ಮೊಹಿತೆ, ಅಥಣಿಯ ಕಾಂಗ್ರೆಸ್ಸಿನ ಮುಖಂಡರಾದ ರಮೇಶ ಸಿಂದಗಿ, ಚಿಕ್ಕೋಡಿ ಡಿ, ಡಿ ,ಪಿ ,ಐ ಶ್ರೀ ಆರ್.ಎಸ್. ಸೀತಾರಾಮು, ಕ್ಷೇತ್ರಶಿಕ್ಷಣಾಧಿಕಾರಿಗಳು, ಮುಖಂಡರು, ಮುದ್ದು ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.
ವರದಿ. ವಿಠ್ಠಲ ಖೋಕಾಟೆ
