ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಾಜಿ ಸಮಾಜ ಕಲ್ಯಾಣ ಸಚಿವರಾದ ಎಚ್. ಆಂಜನೇಯ ಅವರಿಗೆ MLC ಮಾಡುವಂತೆ ಒತ್ತಾಯಿಸಿ ರಕ್ತದಲ್ಲಿ ಪತ್ರ ಬರೆದ ಮಾದಿಗ ದಂಡೋರ ಪದಾಧಿಕಾರಿಗಳು

ಯಾದಗಿರಿ: ಯಾದಗಿರಿಯಲ್ಲಿ ಜರುಗಿದ ಆರೋಗ್ಯ ಆವಿಷ್ಕಾರ ಸಮಾರಂಭದ ಚಾಲನೆಗೆ ಆಗಮಿಸಿದ ಮುಖ್ಯಮಂತ್ರಿಗಳನ್ನು ಭೇಟಿಯಾದ ಮಾದಿಗ ದಂಡೋರ ರಾಜ್ಯಾಧ್ಯಕ್ಷ ಬಿ. ನರಸಪ್ಪ ಅವರು ಯಾದಗಿರಿ ಸಮಿತಿ ವತಿಯಿಂದ ವಿವಿಧ ಬೇಡಿಕೆ ಈಡೇರಿಕೆಗೆ ಮನವಿ ಸಲ್ಲಿಸಿದರು.

ಒಳ ಮೀಸಲಾತಿ ವಿಷಯದಲ್ಲಿ ಸರ್ಕಾರ ಹೊರಡಿಸಿದ ಜಾತಿ ಸಮೀಕ್ಷೆಯಲ್ಲಿ ಅಧಿಕಾರಿಗಳು ರಾಜಧಾನಿ ಬೆಂಗಳೂರು ನಗರ ಸೇರಿದಂತೆ ಪಟ್ಟಣ, ನಗರಸಭೆ ಗಳಲ್ಲಿ ಜಾತಿ ಸಮೀಕ್ಷೆಯಲ್ಲಿ ಭಾಗವಹಿಸಿದೆ ನಿರ್ಲಕ್ಷ್ಯ ತೋರಿದ್ದಾರೆ, ಅಂತಹವರ ವಿರುದ್ಧ ಕಾನೂನು ಕ್ರಮ ತೆಗೆದು ಕೊಳ್ಳಲು ಮನವಿ ಪತ್ರ ನೀಡಿ ವಿನಂತಿಸಿದರು.

ಅತಿ ಶೀಘ್ರದಲ್ಲೇ ಕಡ್ಡಾಯವಾಗಿ ಜಾತಿ ಸಮೀಕ್ಷೆ ನಡೆಸಿ, ಕಾಟಾಚಾರಕ್ಕೆ ಸಮೀಕ್ಷೆ ಮಾಡದೆ ಸರಿಯಾದ ರೀತಿಯಲ್ಲಿ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಮಾದಿಗರಿಗೆ ಬರುವಂತ ಪಾಲನ್ನು ಸರಿ ಸಮಾನವಾಗಿ ಸಿಗುವಂತೆ ಜಾರಿಗೊಳಿಸಲಾಗುವದು ಎಂದು ಪದಾಧಿಕಾರಿಗಳಿಗೆ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ತಾಲೂಕ ಅಧ್ಯಕ್ಷರಾದ ರವಿ ಬುರನೊಳ ತಿಳಿಸಿದ್ದಾರೆ.

ವಿಧಾನಸೌಧದ ಆವರಣದಲ್ಲಿ ಶಿವಶರಣ ಮಾದಾರ ಚೆನ್ನಯ್ಯನ ಕಂಚಿನ ಪುತ್ಥಳಿ ಅನಾವರಣ, ಕಲಬುರಗಿ ವಿಮಾನ ನಿಲ್ದಾಣಕ್ಕೆ ದೇಶದ ಮಾಜಿ ಉಪ ಪ್ರಧಾನಿ ಮಂತ್ರಿಗಳಾದ ಡಾ. ಬಾಬು ಜಗಜೀವನ್‌ ರಾಮ್ ಹೆಸರನ್ನು ನಾಮಕರಣ ಮಾಡುವದು, ಯಾದಗಿರಿ ಜಿಲ್ಲೆಯ ನಾಲ್ಕು ಪ್ರಮುಖ ರಸ್ತೆಗಳಲ್ಲಿ ಬಾಬು ಜಗಜೀವನ್ ರಾಮ್ ರವರ ಪುತ್ತಳಿಯನ್ನು ಅನಾವರಣಗೊಳಿಸುವುದು, ಸಮುದಾಯದ ಕಾಂಗ್ರೆಸ್ ಪಕ್ಷದ ಕಟ್ಟ ಅಭಿಮಾನಿಯಾದ ಮಾಜಿ ಸಚಿವ ಎಚ್‌. ಆಂಜನೇಯರವರನ್ನು MLC ಆಯ್ಕೆ ಮಾಡಿ ಮಂತ್ರಿ ಸ್ಥಾನವನ್ನು ಕೊಡಬೇಕೆಂದು ಮನವಿ ಕೊಟ್ಟು ತಿಳಿಸಿದ್ದಾರೆ.

ಹಾಗೆಯೇ ಯಾದಗಿರಿ ಜಿಲ್ಲೆಯ ಪಕ್ಷದ ನಿಷ್ಠಾವಂತ ಗಣೇಶ್ ದುಪ್ಪಲ್ ರವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನವನ್ನು ನೀಡ ಬೇಕು ಮತ್ತು ಗುರುಮಠಕಲ್ ತಾಲೂಕ ಘೋಷಣೆಯಾಗಿ ಅನೇಕ ವರ್ಷಗಳು ಕಳೆದರೂ ಕೂಡ ತಾಲೂಕಿಗೆ ಸಂಬಂಧಿಸಿದಂತೆ ಅನೇಕ ಕಚೇರಿಗಳಿಲ್ಲದೆ ಗುರುಮಠಕಲ್ ತಾಲೂಕಿನ ಜನರು ಪರದಾಡುವ ಪರಿಸ್ಥಿತಿ ಎದುರಾಗಿದೆ ಆದಷ್ಟು ಬೇಗನೆ ಎಚ್ಚೆತ್ತುಕೊಂಡು ಸಂಬಂಧಪಟ್ಟ ಇಲಾಖೆಗಳನ್ನು ತಾಲೂಕಿಗೆ ಕೊಡಬೇಕೆಂದು, ಜಿಲ್ಲೆಯ ಕಡೇಚೂರು ಕೆಮಿಕಲ್ ಫ್ಯಾಕ್ಟರಿಯನ್ನು ಸಂಪೂರ್ಣ ಬಂದ್ ಮಾಡಿ ಅಲ್ಲಿನ ಜನರಿಗೆ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಆಗದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಯಾದಗಿರಿ ಜಿಲ್ಲೆಯ ಮಾದಿಗ ದಂಡೋರ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳು ಅವರ ಸ್ವಂತ ರಕ್ತದಲ್ಲಿ ಪತ್ರ ಬರೆದು ನಾಡಿನ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡರು.

ಜಿಲ್ಲಾಧ್ಯಕ್ಷರಾದ ಕಾಶಪ್ಪ ಮಾದಿಗ ಹೆಗ್ಗಣಗೇರಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರು ನಡುಮನೆ, ಮಲ್ಲು ಬೆಳಗೇರಾ, ರವಿ ಬುರನೋಳ್ ತಾಲೂಕು ಅಧ್ಯಕ್ಷ ಗುರುಮಠಕಲ್, ಮಲ್ಲಿಕಾರ್ಜುನ ಗ್ರಾಮ ಘಟಕ ಅಧ್ಯಕ್ಷ, ತಿಪಣ್ಣ ತಾಲೂಕು ಉಪಾಧ್ಯಕ್ಷರು ಮತ್ತು ಇನ್ನು ಅನೇಕ ಮಾದಿಗ ದಂಡೋರ ಪದಾಧಿಕಾರಿಗಳು ಭಾಗಿಯಾಗಿದ್ದರು.

ವರದಿ: ಜಗದೀಶ್ ಕುಮಾರ್ ಭೂಮಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ