ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ ಹೊಸ ಸೇತುವೆ ನಿರ್ಮಾಣವಾದರೆ ಜನತೆಗೆ ಅನುಕೂಲ : ಶಾಸಕ ಜೆ. ಎನ್. ಗಣೇಶ

ಬಳ್ಳಾರಿ / ಕಂಪ್ಲಿ : ಕಂಪ್ಲಿ-ಗಂಗಾವತಿ ಸಂಪರ್ಕದ ತುಂಗಭದ್ರಾ ನದಿ ಸೇತುವೆ ತುಂಬ ಹಳಯದ್ದಾಗಿದ್ದು, ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಕಂಪ್ಲಿ ಹೊಸ ಸೇತುವೆಗೆ ಕೋಟ್ಯಾಂತರ ಅನುದಾನ ನೀಡಿ, ಚಾಲನೆ ನೀಡಿದರೆ ಈ ಭಾಗದ ರೈತರ, ವಿದ್ಯಾರ್ಥಿಗಳ, ಪ್ರಯಾಣಿಕರಿಗೆ ತುಂಬ ಅನುಕೂಲವಾಗಲಿದೆ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.
ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಕಲ್ಯಾಣ ಪಥ ಯೋಜನೆಯಡಿ ಸುಮಾರು 6.10ಕೋಟಿ ವೆಚ್ಚದ ನಿರ್ಮಿಸಲಿರುವ ಎಮ್ಮಿಗನೂರು-ಇಟಗಿ ಬಿಟಿ ರಸ್ತೆ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ಸಲ್ಲಿಸಿದ ನಂತರ ಮಾತನಾಡಿ, ಇಲ್ಲಿನ ಸೇತುವೆಯು 75 ವರ್ಷದ ಹಳೆಯದಾಗಿದೆ. ನದಿ ಪ್ರವಾಹದ ವೇಳೆ ಸಂಚಾರ ಕಡಿತವಾಗಿ ರೈತರು, ಪ್ರಯಾಣಿಕರು, ವಿದ್ಯಾರ್ಥಿಗಳಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ಇಲ್ಲಿ ಹೊಸ ಸೇತುವೆ ನಿರ್ಮಿಸಬೇಕೆಂದು ಸದನದಲ್ಲಿ ಧ್ವನಿ ಎತ್ತಲಾಗಿದೆ. ಈಗ ಸಚಿವ ಸತೀಶ ಜಾರಕಿಹೋಳಿ ಅವರು ಪರಿಶೀಲಿಸಲಿದ್ದು, ಹೊಸ ಸೇತುವೆಯ ಭರವಸೆ ಮೂಡಿದೆ. ನಬಾರ್ಡ್ ಮತ್ತು ಲೋಕೋಪಯೋಗಿಯ ಸುಮಾರು 110 ಕೋಟಿ‌ ವೆಚ್ಚದಲ್ಲಿ ಕಂಪ್ಲಿ ಸೇತುವೆ ನಿರ್ಮಾಣದ ಸಾಧ್ಯತೆ ಇದೆ. ಬಹಳ ವರ್ಷಗಳಿಂದ ಎಮ್ಮಿಗನೂರು-ಇಟಗಿ ಮಾಗಾಣಿ ರಸ್ತೆ ಆಗಿರಲಿಲ್ಲ. ಆದರೆ, ಈಗ ಕೋಟ್ಯಾಂತರ ವೆಚ್ಚದಲ್ಲಿ ಬಿಟಿ ರಸ್ತೆ ಮಾಡಲಾಗುತ್ತಿದೆ. ಈಗಾಗಲೇ ಒಂದು ಕೋಟಿ ವೆಚ್ಚದಲ್ಲಿ ಒಂದು ಕಿ.ಮೀ ಸಿಸಿ ರಸ್ತೆ ಮಾಡಲಾಗಿದೆ. 30 ಹಾಸಿಗೆಯ ಸರ್ಕಾರಿ ಆಸ್ಪತ್ರೆ, ಎಪಿಎಂಸಿ ಮಾರುಕಟ್ಟೆ ಕಾಮಗಾರಿಗೆ ಅತಿ ಶೀಘ್ರದಲ್ಲೇ ಚಾಲನೆ ನೀಡಲಾಗುವುದು. ಎಮ್ಮಿಗನೂರು ಪಟ್ಟಣ ಪಂಚಾಯಿತಿ ಮಾಡಬೇಕಾಗಿದೆ.‌ ಕಂಪ್ಲಿ ತಾಲೂಕಿನಲ್ಲಿ ಸುಮಾರು 34ಕೋಟಿ ವೆಚ್ಚದಲ್ಲಿ ಕಂಪ್ಲಿಕೋಟೆ – ರಾಮಸಾಗರ, ಜವುಕು-ದೇವಸಮುದ್ರ, ಎಮ್ಮಿಗನೂರು-ಇಟಗಿ ಸೇರಿದಂತೆ ರೈತರ ಮಾಗಾಣಿ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಪಿಡಿಒ ತಾರಾನಾಯ್ಕ್, ಗ್ರಾಪಂ ಅಧ್ಯಕ್ಷೆ ಶಾರದಾ, ಸದಸ್ಯರು, ಜನಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ