ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯಲ್ಲಿ ನಡೆದ ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ

ಬಳ್ಳಾರಿ / ಕಂಪ್ಲಿ : ಪಟ್ಟಣದ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಶ್ರೀನಿವಾಸರಾವ್ ಅವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಮಂಗಳವಾರ ನಡೆಯಿತು.
ತಾಲೂಕಿನ ಅರ್ಹ ಫಲಾನುಭವಿಗಳು ಈ ಯೋಜನೆಗಳ ಲಾಭ ಪಡೆಯಲು ನೆರವಾಗಬೇಕು, ಪ್ರತಿ ತಿಂಗಳು ಆಯಾ ಇಲಾಖೆಯಲ್ಲಿ ನಡೆಯುವ ಮಾಸಿಕ ಸಭೆಗಳಲ್ಲಿ ಭಾಗವಹಿಸಿ, ಗ್ಯಾರಂಟಿ ಯೋಜನೆಯ ಅನುಷ್ಠಾನದ ಬಗ್ಗೆ ಚರ್ಚಿಸಿ, ಫಲಾನುಭವಿಗಳಿಗೆ ಒದಗಿಸಬೇಕು ಎಂದು ಅಧ್ಯಕ್ಷ ಕೆ. ಶ್ರೀನಿವಾಸರಾವ್ ತಿಳಿಸಿದರು.
ಗೃಹ ಲಕ್ಷ್ಮೀ ಯೋಜನೆಯು ಆಗಸ್ಟ್ 2023ರರಿಂದ ಜನವರಿ 2025ವರೆಗೆ ತಾಲೂಕಿನಲ್ಲಿ ಸುಮಾರು 4.80.717 ಫಲಾನುಭವಿಗಳು ಹೊಂದಿದ್ದು, ಸುಮಾರು 96.14 ಕೋಟಿ ಹಣ ಬಿಡುಗಡೆಯಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಸಿಡಿಪಿಒ ಕೆ. ಮೋಹನ್ ಮಾಹಿತಿ ನೀಡಿದರು.
ಜೆಸ್ಕಾಂ ಎ‌.ಇ ಭೀಮೇಶ ಅವರು ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದ ಫಲಾನುಭವಿಗಳಿಗೆ ಇಲಾಖೆಯು ಸಹಕಾರ ನೀಡುತ್ತಿದೆ ಎಂದು ತಿಳಿಸಿದರು.
ಆಹಾರ ಇಲಾಖೆಯ ಡಿ.ಒ ಪರಶುರಾಮ ಮಾತನಾಡಿ, ಒಟ್ಟು 394423 ಪಡಿತರ ಚೀಟಿಗಳಿದ್ದು, ಸುಮಾರು 1454634 ಫಲಾನುಭವಿಗಳಿದ್ದು, ಸುಮಾರು 236705110 ವೆಚ್ಚ ಭರಿಸಿದೆ. ಪ್ರತಿ ತಿಂಗಳು ಅಕ್ಕಿ ವಿತರಿಸಲಾಗುತ್ತಿದೆ ಎಂದರು.
ಡಿಸ್ಟಿಕ್ ಕೌನ್ಸಿಲರ್ ವೆಂಕಟೇಶ ಇವರು ಯುವನಿಧಿ ಯೋಜನೆ ಹಾಗೂ ಸಾರಿಗೆ ಇಲಾಖೆಯ ಸಂಚಾರಿ ನಿಯಂತ್ರಣಾಧಿಕಾರಿ ಆದಿಶೇಷ ಇವರು ಶಕ್ತಿ ಯೋಜನೆ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್. ಕೆ. ಶ್ರೀಕುಮಾರ, ಎಸ್ ಡಿ ಎ ಸುರೇಶ ಬಂಡಾರಿ, ಸಮಿತಿ ಸದಸ್ಯರಾದ ಶಿವಕುಮಾರ, ಶಿವರಾಜಕುಮಾರ, ವಿ.ರಮೇಶ, ಗೌಡ್ರು ಕೆ.ಸಿದ್ದಪ್ಪ, ಎಂ.ರಾಜಾಭಕ್ಷಿ, ತಿಮ್ಮಪ್ಪ, ಸಿ.ವಿಜಯಲಕ್ಷ್ಮಿ, ರೇಣುಕಮ್ಮ ಸೇರಿದಂತೆ ತಾ. ಪಂ. ಸಿಬ್ಬಂದಿಗಳು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ