
ಯಾದಗಿರಿ/ಗುರುಮಠಕಲ್: ತಾಲೂಕಿನ ಕೊಂಕಲ್ ಗ್ರಾಮದಲ್ಲಿ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಹಾಗೂ ಜಿಲ್ಲಾ ಪಂಚಾಯತಿ ಯಾದಗಿರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಮತ್ತು ಕಲಿಕೆ ಟಾಟಾ ಟ್ರಸ್ಟ್ ಇವರ ಸಂಯೋಗದಲ್ಲಿ ದಾಖಲಾತಿ ಆಂದೋಲನ ಕಾರ್ಯಕ್ರಮ ನಡೆಯಿತು.
ಗುರುಮಠಕಲ್ ತಾಲ್ಲೂಕಿನ ಕೊಂಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರುವ ಉದ್ದೇಶದಿಂದ ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮ ಸೋಮವಾರ ನಡೆಯಿತು.
ಪ್ರಸ್ತುತ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು ಈ ಸಮಯದಲ್ಲಿ ಜಿಲ್ಲಾ ಪಂಚಾಯತಿ ಯಾದಗಿರಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಮತ್ತು ಕಲಿಕೆ ಟಾಟಾ ಟ್ರಸ್ಟ್ ಇವರ ಸಂಯೋಗದಲ್ಲಿ ಗುರುಮಠಕಲ್ ತಾಲೂಕಿನ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಕೊಂಕಲ್ ನಲ್ಲಿ ವಿಶೇಷ ದಾಖಲಾತಿ ಮತ್ತು ಹಾಜರಾತಿ ಆಂದೋಲನ ಕಾರ್ಯಕ್ರಮ ಮಾಡಲಾಯಿತು.
ದಾಖಲಾತಿ ಮತ್ತು ಹಾಜರಾತಿ ಕುರಿತು ಸಾರ್ವಜನಿಕರಲ್ಲಿ ಅರಿವನ್ನು ಮೂಡಿಸಲು ಕುಂಭಹೊತ್ತ ಮಕ್ಕಳಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪ್ರಭಾತಪೇರಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಕೊಂಕಲ್ ಗ್ರಾಮದ ಪಂಚಾಯತ್ ಅಧ್ಯಕ್ಷರು, SDMC ಅಧ್ಯಕ್ಷರು ಸ್ವಪ್ನ, ಉಪಾಧ್ಯಕ್ಷರು ನಿಂಗಪ್ಪ ಹಾಗೂ ಸರ್ವ ಸದಸ್ಯರು, CRP, HM ಮೋಹನ್ ಕುಮಾರ್ ಕಲಿಕೆ ಟಾಟಾ ಟ್ರಸ್ಟ್ ಸಂಯೋಜಕರಾದ ಮಲ್ಲಿಕಾರ್ಜುನ್ ಮತ್ತು ಮಕ್ಕಳ ಪಾಲಕರು,ಶಾಲೆಯ ವಿದ್ಯಾರ್ಥಿಗಳು ಸೇರಿದಂತೆ ಇತರರು ಭಾಗವಹಿಸಿದ್ದರು.
ವರದಿ: ಜಗದೀಶ್ ಕುಮಾರ್ ಭೂಮಾ
