ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಖ್ಯಮಂತ್ರಿ,ಉಪ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯ

ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಆರ್ ಸಿ ಬಿ ತಂಡ ವಿಜಯೋತ್ಸವ ಆಚರಿಸುವ ವೇಳೆಯ ನೂಕುನುಗ್ಗಲಿನಲ್ಲಿ 11 ಜನ ಸಾವನ್ನಪ್ಪಿ 56 ಜನ ಗಾಯಗೊಂಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಗೃಹ ಮಂತ್ರಿ ಪರಮೇಶ್ವರ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಭಾರತೀಯ ಜನತಾ ಪಾರ್ಟಿ ಚಾಮರಾಜನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನೂರ್ ಮಹದೇವಸ್ವಾಮಿ ಒತ್ತಾಯಿಸಿದರು.

ಹನೂರು ಪಟ್ಟಣದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯ ವೇಳೆಯಲ್ಲಿ ಮಾತನಾಡಿ ನಂತರ ಅವರು ತಾಲೂಕು ದಂಡಾಧಿಕಾರಿ ಗುರುಪ್ರಸಾದ್ ಅವರಿಗೆ ಮನವಿ ಸಲ್ಲಿಸಿ ನಂತರ ಮಾತನಾಡಿದ ಅವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2025ರ ರಾಯಲ್ ಚಾಲೆಂಜರ್ಸ್ ಆರ್ ಸಿ ಬಿ ವಿಜಯೋತ್ಸವವನ್ನು ಆಚರಿಸಲು ರಾಜ್ಯ ಸರ್ಕಾರವೇ ಮಾಡಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಭಿಮಾನಿಗಳಿಗೆ ಟಿಕೆಟ್ ಇಲ್ಲದೆ ಉಚಿತ ಎಂದು ತಿಳಿಸಿದ ನಂತರ ಲಕ್ಷಾಂತರ ಅಭಿಮಾನಿಗಳು ಜಮಾವಣೆಗೊಂಡು ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಸಹ ಇದು ಸರಿಯಾದ ಕ್ರಮವಲ್ಲ ಕಾರ್ಯಕ್ರಮ ಮಾಡುವುದು ಒಳಿತಲ್ಲ ಎಂದು ತಿಳಿಸಿದ ನಂತರವೂ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೃಹ ಸಚಿವ ಪರಮೇಶ್ವರ್ ಈ ಕಾರ್ಯಕ್ರಮವನ್ನು ಆಯೋಜನೆ ವೇಳೆಯಲ್ಲಿ ನೂಕುನುಗ್ಗಲು ಉಂಟಾಗಿ ಕಾಲ್ತುಳಿತದಲ್ಲಿ 11 ಜನ ಅಭಿಮಾನಿಗಳು ಮೃತಪಟ್ಟಿದ್ದು 56 ಜನ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನ ಜರುಗಿದೆ ಹೀಗಾಗಿ ಸರ್ಕಾರ ಪೊಲೀಸರನ್ನು ನೇರ ಹೊಣೆ ಮಾಡಿ ದಕ್ಷ ಪ್ರಾಮಾಣಿಕ ಅಧಿಕಾರಿ ದಯಾನಂದ್ ಮತ್ತು ಇತರ ಪೊಲೀಸ್ ಸಿಬ್ಬಂದಿ ವರ್ಗದವರನ್ನು ಅಮಾನತ್ತು ಪಡಿಸುವ ಮೂಲಕ ಅವೈಜ್ಞಾನಿಕ ಕ್ರಮವನ್ನು ಅನುಸರಿಸಿದೆ ಹೀಗಾಗಿ ನೈತಿಕ ಹೊಣೆ ಹೊತ್ತು ರಾಜ್ಯ ಸರ್ಕಾರ ರಾಜೀನಾಮೆ ನೀಡಬೇಕು ಮಂಗಳವಾರ ರಾಜ್ಯಾದಂತ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ ಎಂದು ಇದೇ ವೇಳೆಯಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಲೋಕೇಶ್ ಜತ್ತಿ,ಕೆ ಪಿ ವೃಷಭೇಂದ್ರ ಸ್ವಾಮಿ ಬಿಜೆಪಿ ಅಧ್ಯಕ್ಷರು ಹನೂರು ಮಂಡಲ, ಹೊನ್ನೂರು ಮಹದೇವಸ್ವಾಮಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ನಾಗೇಂದ್ರ ಜಿಲ್ಲಾ ಸಂಚಾಲಕರು ಪುಟ್ಟಸ್ವಾಮಿ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೃಷ್ಣೇಗೌಡ ಮಂಡಲ ಉಪಾಧ್ಯಕ್ಷರು ಗುರುಪಾದ ಸ್ವಾಮಿ ಮಂಡಲ ಉಪಾಧ್ಯಕ್ಷರು ದೊಡ್ಮಾದಪ್ಪ ಮಂಡಲ ಉಪಾಧ್ಯಕ್ಷ ನಂಜುಂಡಸ್ವಾಮಿ ಮಂಡಲ ಕಾರ್ಯದರ್ಶಿ ಮುಖಂಡರುಗಳಾದ ಮಹದೇವಸ್ವಾಮಿ ಪ್ರಸನ್ನ ಮಾದೇವು ನಾಗರಾಜು ಮಹದೇವಪ್ಪ ಇನ್ನಿತರರು ಇದ್ದರು.

ವರದಿ: ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ