ಬೆಂಗಳೂರು : ಬೆಳ್ಳಂಬೆಳಗ್ಗೆ ಕರಾವಳಿ ಜಿಲ್ಲೆಗಳಲ್ಲಿ ವರುಣ ಆರ್ಭಟಿಸುತ್ತಿದೆ. ಈಗಗಾಲೇ ಮಂಗಳೂರು ನಗರದ ಹಲವು ಪ್ರದೇಶ ಪ್ರವಾಹಕ್ಕೆ ತುತ್ತಾಗಿದೆ. ಗುಡ್ಡ ಪ್ರದೇಶಗಳು ಕುಸಿತದ ಭೀತಿಯಲ್ಲಿವೆ. ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ಇಂದು ರೆಡ್ ಅಲರ್ಟ್ ಇಲ್ಲದಿದ್ದರೂ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಳೆ ಕಡಿಮೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
3 ಜಿಲ್ಲೆಗೆ ಆರೆಂಜ್ ಅಲರ್ಟ್
ದಕ್ಷಿಣ ಕನ್ನಡ , ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಹಿನ್ನೆಲೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಕೊಡಗು ಹಾಗೂ ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಎಲ್ಲೆಲ್ಲಿ ಮಳೆ ಸಾಧ್ಯತೆ?
ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಗದಗ ಮತ್ತು ವಿಜಯಪುರ, ಬೀದರ್, ಕಲಬುರ್ಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ (40-50 ಕಿ.ಮೀ.) ಹಗುರ ಮಳೆಯಾಗುವ ಸಾಧ್ಯತೆ ಇದೆ.
ವರದಿ : ಜಿಲಾನಸಾಬ್ ಬಡಿಗೇರ್
