
ಚಾಮರಾಜನಗರ/ ಗುಂಡ್ಲುಪೇಟೆ :ಕರ್ನಾಟಕ ಕಾವಲು ಪಡೆಯ ವತಿಯಿಂದ ಇಂದು ಗುಂಡ್ಲುಪೇಟೆ ತಾಲ್ಲೂಕಿನ ಬೆಂಡರವಾಡಿ ಗ್ರಾಮ ಬಾಳೆ ಎಲೆ ಮಾದಯ್ಯ ಟ್ರಸ್ಟ್ ಹಾಗೂ ಬೆಂಡರವಾಡಿ ಗ್ರಾಮಸ್ಥರ ನೇತೃತ್ವದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸುರೇಶ್ ಕುಮಾರ್ ರವರ ಜೊತೆ ಪುತ್ತನಪುರ, ವಡ್ಡನಹೊಸಹಳ್ಳಿ, ಬಸವಾಪುರ, ಅಣ್ಣೂರು ಕೇರಿ ಐದು ಗ್ರಾಮಸ್ಥರ ಜೊತೆ ಗೂಡಿ ಸಭೆ ನಡೆಸಲಾಯಿತು. ಸುತ್ತಮುತ್ತ ವನ್ಯ ಜೀವಿ ಹುಲಿ ಚಿರತೆ ಕಾಟ ಇರುವುದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ ಕೂಡಲೇ ಹುಲಿಯನ್ನು ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ಹೇಳಿಕೊಂಡರು.
ಈ ಸಂದರ್ಭದಲ್ಲಿ ಕಾವಲು ಪಡೆಯ ತಾಲ್ಲೂಕು ಅಧ್ಯಕ್ಷರಾದ ಎ. ಅಬ್ದುಲ್ ಮಾಲಿಕ್ ಹಾಗೂ ಕನ್ನಡಪರ ಹಿರಿಯ ಹೋರಾಟಗಾರರಾದ ಬ್ರಹ್ಮಾನಂದ್, ಪರಿಸರ ಸಂರಕ್ಷಣಾ ಸಮಿತಿ ತಾಲ್ಲೂಕು ಅಧ್ಯಕ್ಷರಾದ ಪಿ. ಬಾಲು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳ ಕಾಟದಿಂದ ರೈತರು ಸಾಕು ಪ್ರಾಣಿಗಳನ್ನು ಕಳೆದುಕೊಂಡು ಸಾಲಗಾರರಾಗುತ್ತಿದ್ದಾರೆ ಜೊತೆಗೆ ಅವರ ಜೀವದ ಭಯವು ಇದೇ ಆದ್ದರಿಂದ ತಕ್ಷಣ ಹುಲಿ ಸೆರೆ ಹಿಡಿಯುವ ಕಾರ್ಯಚರಣೆ ನಡೆಸಬೇಕೆಂದು ಒತ್ತಾಯಿಸಿದರು.
ಇದೇ ವೇಳೆ ಅಧಿಕಾರಿಗಳಾದ ಸುರೇಶ್ ಕುಮಾರ್ ರವರು ಮಾತನಾಡಿ 15 ದಿನಗಳಲ್ಲಿ ಹುಲಿ ಸೆರೆಹಿಡಿಯುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಆರ್.ಎಫ್.ಓ. ಶಿವುಕುಮಾರ್, ಕಾವಲು ಪಡೆಯ ತಾಲ್ಲೂಕು ಗೌರವಾಧ್ಯಕ್ಷರಾದ ರಾಮೇಗೌಡ, ಟೌನ್ ಸಂಚಾಲಕರಾದ ಮಿಮಿಕ್ರಿರಾಜು, ಸಾಹಿತಿ ಕಾಳಿಂಗಸ್ವಾಮಿ ಸೇರಿದಂತೆ ಮುಖಂಡರು ಹಾಗೂ ಗ್ರಾಮಸ್ಥರು ಹಾಜರಿದ್ದರು.
ವರದಿ ಗುಂಡ್ಲುಪೇಟೆ ಕುಮಾರ್



















