
ಬೆಳಗಾವಿ/ಅಥಣಿ: ಅಥಣಿ ನಗರದ ಎಸ್, ಎಸ್,ಎಮ್,ಎಸ್, ಕಾಲೇಜು ಮೈದಾನದಲ್ಲಿ ನಡೆದ ತಾಲೂಕಾ ಆಡಳಿತ,ಪತಂಜಲಿ ಯೋಗ ಪೀಠ ಹರಿದ್ವಾರ ಅಥಣಿ ಶಾಖೆ, ಹಾಗೂ ಸರಕಾರಿ,ಅನುದಾನಿತ,ಅನುದಾನರಹಿತ ಶಾಲಾ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಸಮಾರಂಭವನ್ನು ಮಾಜಿ ಉಪ ಮುಖ್ಯಮಂತ್ರಿಗಳು, ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿಯವರು ಸಸಿಗೆ ನೀರು ಹಾಕಿ, ಯೋಗಾಸನ ಮಾಡುವುದರ ಮೂಲಕ ಚಾಲನೆ ನೀಡಿದರು.

ಮತ್ತು ಇದೇ ವೇಳೆಯಲ್ಲಿ ಮಾತನಾಡಿದ ಶಾಸಕರು
ಇದು ಮಾತನಾಡುವ ವೇದಿಕೆಯಲ್ಲ ಯೋಗವನ್ನು ಮಾಡುವ ವೇದಿಕೆ, ಅದಕ್ಕೆ ನಾನು ಜಾಸ್ತಿ ಮಾತನಾಡುವುದಿಲ್ಲ ನಮ್ಮ ಸಮಾಜವನ್ನು ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕಾದದ್ದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಅದು ಯೋಗದಿಂದ ಮಾತ್ರ ಸಾಧ್ಯ ಎಂದು ಹೇಳಿದರು.
ಇದೇ ಸಮಾರಂಭದಲ್ಲಿ ಅಂತರಾಷ್ಟ್ರೀಯ ಯೋಗ ಗುರುಗಳಾದ ಶ್ರೀ ಭವರಲಾಲ್ ಆರ್ಯ ಹಾಗೂ ವೈದ್ಯರಾದ ಶ್ರೀ ಮಲ್ಲಿಕಾರ್ಜುನ ಹಂಜಿ, ಅಥಣಿ ತಹಶೀಲ್ದಾರರಾದ ಶ್ರೀ ಸಿದ್ದಾರಾಯ ಬೋಸಗಿ, ಪುರಸಭೆ ಅಧ್ಯಕ್ಷರಾದ ಶ್ರೀಮತಿ ಶಿವಲೀಲಾ ಬುಟಾಳಿ, ಉಪಾಧ್ಯಕ್ಷರಾದ ಶ್ರೀಮತಿ ಭುವನೇಶ್ವರಿ ಯಕಂಚ್ಚಿ, ಅಥಣಿ ಸಿ.ಪಿ.ಐ ಶ್ರೀ ಸಂತೋಷ ಹಳ್ಳೂರ, ಬನಜವಾಡ ಸಂಸ್ಥೆಯ ಮುಖ್ಯಸ್ಥರಾದ ಲಕ್ಷ್ಮಣ ಬಣಜವಾಡ, ತಾಲೂಕಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಶಿವಾನಂದ ಕಲ್ಲಾಪುರ್ ಹಾಗೂ ಅಥಣಿ ತಾಲೂಕಾ ಮಟ್ಟದ ಎಲ್ಲ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಿರಿಯ ಮುಖಂಡರು,ಗಣ್ಯ ವ್ಯಕ್ತಿಗಳು, ಎಲ್ಲಾ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಪಾಲ್ಗೊಂಡಿದ್ದರು.
ವರದಿಗಾರ. ವಿಠ್ಠಲ ಖೋಕಾಟೆ, ಅಥಣಿ



















