
ಬೆಳಗಾವಿ/ ಅಥಣಿ: ಸನ್ 2024-25ನೇ ಸಾಲಿನ ಪರಿಶಿಷ್ಟ ಪಂಗಡದ ವಿವಿಧ ಅಭಿವೃದ್ಧಿ ಯೋಜನೆಯಡಿಯಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಂಕಚ್ಚಿ ಗ್ರಾಮದ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ಅಂದಾಜು 200 ಲಕ್ಷ,ರೂ,ಗಳಲ್ಲಿ ಕೊಳವೆ ಬಾವಿಯ ಜೊತೆಗೆ ಅಡುಗೆ ಕೋಣೆ ಹಾಗೂ ಡೈನಿಂಗ್ ಹಾಲ್ ನಿರ್ಮಾಣದ ಭೂಮಿ ಪೂಜೆಯನ್ನು ಮಾಜಿ ಉಪ ಮುಖ್ಯಮಂತ್ರಿಗಳು ಅಥಣಿಯ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಲಕ್ಷ್ಮಣ ಸವದಿಯವರು ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅಥಣಿಯ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಶ್ರೀ ಬಸವರಾಜ ಯಾದವಾಡ ಯಂಕಚ್ಚಿ ಗ್ರಾಮದ ಮುಖ್ಯ ವ್ಯಕ್ತಿಗಳು ಗುರು ಹಿರಿಯರು ಹಾಗೂ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.
ವರದಿ :ವಿಠ್ಠಲ ಖೋಕಾಟೆ, ಅಥಣಿ



















