ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗುರುಗಳ ಮಹತ್ವ: ಸನಾತನ ಸಂಸ್ಥೆಯಿಂದ ಮಕ್ಕಳು ಮತ್ತು ಪೋಷಕರಿಗಾಗಿ ವಿಶೇಷ ಪ್ರವಚನ

ದಕ್ಷಿಣ ಕನ್ನಡ/ಮಂಗಳೂರು : ಗುರು ಪೂರ್ಣಿಮೆಯು ಶಿಷ್ಯರಿಗೆ ಗುರು ತತ್ವವನ್ನು ಪೂರೈಸಲು ಮತ್ತು ಗುರುವಿನ ಅನುಗ್ರಹವನ್ನು ಪಡೆಯಲು ಒಂದು ಅನನ್ಯ ಅವಕಾಶವನ್ನು ನೀಡುತ್ತದೆ. ಗುರು-ಶಿಷ್ಯ ಪರಂಪರೆ ಭಾರತದ ಸಂಸ್ಕೃತಿಯ ಪವಿತ್ರ ಭಾಗವಾಗಿದೆ . ಗುರು ಪೂರ್ಣಿಮೆಯನ್ನು ಆಚರಿಸುವುದು ಗುರುಗಳಿಗೆ ನಮನ ಸಲ್ಲಿಸುವ ಜೊತೆಗೆ ಈ ಶ್ರೀಮಂತ ಆಧ್ಯಾತ್ಮಿಕ ಪರಂಪರೆಯನ್ನು ಮುಂದುವರಿಸಲು ಪ್ರತಿಜ್ಞೆ ಮಾಡುವ ಒಂದು ಮಾರ್ಗವಾಗಿದೆ ಎಂದು ಸನಾತನ ಸಂಸ್ಥೆಯ ಸೌ. ಲಕ್ಷ್ಮಿ ಪೈ ಇವರು ಹೇಳಿದರು. ಜುಲೈ ೧೦ ರಂದು ಗುರುಪೂರ್ಣಿಮೆಯ ನಿಮಿತ್ತ ಗುರು ಶಿಷ್ಯ ಪರಂಪರೆಯ ಮಹತ್ವ, ಗುರುತತ್ವದ ಕಾರ್ಯ, ವರ್ತಮಾನ ಕಾಲದಲ್ಲಿ ಧರ್ಮರಕ್ಷಣೆಯ ಹಾಗೂ ಧರ್ಮ ಜಾಗೃತಿಯ ಮಹತ್ವ ಇತ್ಯಾದಿ ವಿಷಯಗಳ ಬಗ್ಗೆ ಇವರು ಪ್ರಬೋದನೆಯನ್ನು ನೀಡಿದರು.

ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ಪಿಯು ಕಾಲೇಜ್ ಮತ್ತು ರೆಸಿಡೆನ್ಸಿಯಲ್ ಸ್ಕೂಲ್ ಇದರ ಸಭಾಂಗಣದಲ್ಲಿ ಶಕ್ತಿ- ಸನಾತನ ಸಂಪದ ಎಂಬ ಉಪಕ್ರಮದ ಅಂತರ್ಗತ ಸನಾತನ ಸಂಸ್ಥೆಯ ವತಿಯಿಂದ ವಿಶೇಷ ಪ್ರವಚನ ನಡೆಯಿತು. ಈ ಸಂದರ್ಭದಲ್ಲಿ ಶಕ್ತಿ ಶಿಕ್ಷಣ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ಶ್ರೀ ಕೆ.ಸಿ. ನಾಯಕ್, ಪ್ರಾಂಶುಪಾಲರಾದ ಶ್ರೀ ರಮೇಶ್ ಉಪಸ್ಥಿತರಿದ್ದರು. ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕ ವೃಂದದವರು ಇದರ ಲಾಭವನ್ನು ಪಡೆದುಕೊಂಡಿದ್ದಾರೆ.

ವರದಿ. ಚಂದ್ರಶೇಖರ ಹೆಬ್ಬಾರ್ ಕೊಲ್ಯ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!