ಕಲ್ಬುರ್ಗಿ : ಕರ್ನಾಟಕ ರಾಜ್ಯ ರೈತರ ಉಳಿವಿಗಾಗಿ ಹಾಗೂ ಅಭಿವೃದ್ಧಿಗಾಗಿ ಸ್ವಾಭಿಮಾನ ರೈತರ ರಕ್ಷಣೆಗಾಗಿ ಉದಯವಾಗಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷರಾದ ಎಚ್. ಆರ್. ಬಸವರಾಜಪ್ಪ ಹಾಗೂ ಕಾರ್ಯಾಧ್ಯಕ್ಷರಾದ ಶಿವಪ್ಪ ಅಮಣಿ ಇವರ ಆದೇಶದ ಮೇರೆಗೆ, ಉತ್ಸಾಹಿ ಸಮಾಜ ಸೇವೆ ಮತ್ತು ಈ ಹಿಂದೆ ಅನೇಕ ರೈತ ಪರ ಹೋರಾಟಗಳಲ್ಲಿ ಹಾಗೂ ರೈತರ ಅಭಿವೃದ್ಧಿ ಹೋರಾಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀ ಶಿವರಾಜ್ ಹೆಚ್. ಪಾಟೀಲ್ ಗೋಣಗಿ ತಾಲೂಕು ಕಮಲಾಪುರ್ ಜಿಲ್ಲಾ ಕಲಬುರ್ಗಿ ಇವರನ್ನು ಸಂಘಟನೆಯ ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇಂದಿನಿಂದಲೇ ನೀಡಿರುವ ಹುದ್ದೆಯನ್ನು ಜವಾಬ್ದಾರಿಯಿಂದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನಿಷ್ಠಾವಂತರಾಗಿ ಕಾರ್ಯ ನಿರ್ವಹಿಸಿಕೊಂಡು, ಅಲ್ಲಿ ಇರುವಂತ ಸಮಸ್ಯೆಗಳನ್ನು ತೆಗೆದುಕೊಂಡು ನ್ಯಾಯ ಬದ್ಧ ಸಂವಿಧಾನ ಸ್ವಾಭಿಮಾನಿ ರೈತರಿಗೆ ನ್ಯಾಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ರಾಜ್ಯ ಅಧ್ಯಕ್ಷರಾದ ಎಚ್. ಆರ್. ಬಸವರಾಜಪ್ಪ ಹಾಗೂ ಕಾರ್ಯದರ್ಶಿಯಾದ ಶಿವಪ್ಪ ಅಮಣಿ ರವರು ಶ್ರೀ ಸೋಮಣ್ಣಗೌಡ ಎಸ್ ಪಾಟೀಲ್ ರಾಜ್ಯ ಸಂಘಟನೆ ಕಾರ್ಯದರ್ಶಿ ಕರ್ನಾಟಕ ರಾಜ್ಯ ಇವರ ಮುಖಾಂತರ ಸೂಚಿಸಿರುತ್ತಾರೆ.
ಈ ಸಂದರ್ಭದಲ್ಲಿ ಜಿಲ್ಲೆಯ ರೈತರು ಮುಖಂಡರು ಮತ್ತು ವೀರಣ್ಣ ಗಂಗಾಣಿ ರೈತ ಸೇನೆ ತಾಲೂಕ ಅಧ್ಯಕ್ಷರು ಭಾಗಿಯಾಗಿದ್ದರು.
ವರದಿ : ಚಂದ್ರಶೇಖರ್ ಆರ್. ಪಾಟೀಲ್



















