ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಾರ್ವಜನಿಕರಿಗೆ ಸ್ವಚ್ಛತೆ ರಸ್ತೆಯನ್ನಾಗಿ ನಿರ್ಮಾಣ ಮಾಡಿ ಕೊಡಿ : ಎಂ ಚಂದ್ರಶೇಖರ್

ವಿಜಯನಗರ ಜಿಲ್ಲೆ ಕೊಟ್ಟೂರು ಪಟ್ಟಣದ 8 ನೇ ವಾರ್ಡನ ವೆಂಕಟೇಶ್ ನಾಯ್ಕ್ ರವರ ಮನೆಯಿಂದ ಗಂಗೋತ್ರಿ ಶಾಲೆಯವರೆಗೆ ಮಳೆ ಬಂದರೆ ಸಾಕು ಎಡಗಡೆ ಮತ್ತು ಬಲಗಡೆ ಕಾಲುವೆ ಇಲ್ಲದ ಕಾರಣ ಈ ರಸ್ತೆಯಲ್ಲಿ ಮಳೆ ನೀರು ಹರಿದು ರಸ್ತೆಯು ಕೆಸರು ಗದ್ದೆಯಂತಾಗಿ ತಗ್ಗು ಗುಂಡಿಗಳಲ್ಲಿ ಮಳೆ ನೀರು ನಿಂತು ಈ ವಾರ್ಡನಲ್ಲಿ ವಾಸಿಸುತ್ತಿರುವ ನಿವಾಸಿಗಳಿಗೆ ಹಾಗೂ ಸಣ್ಣಪುಟ್ಟ ಮಕ್ಕಳಿಗೆ ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಮುನ್ನ ಹಾಗೂ ಈ ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಹಾಗೂ ವಿದ್ಯಾರ್ಥಿಗಳು ಶಾಲೆ ಕಾಲೇಜ್ ಗೆ ಹೋಗುವಾಗ ತಗ್ಗು ಗುಂಡಿಗಳನ್ನು ತಪ್ಪಿಸಲು ಹೋಗಿ ಈ ರಸ್ತೆಯಲ್ಲಿ ಬಿದ್ದು ಕೈಕಾಲು ಕೂಡಾ ಮುರಿದುಕೊಂಡು ಹೋಗಿದ್ದಾರೆ ,


ಈ ವಾರ್ಡ್ ನ ನಿವಾಸಿಗಳು 10 ವರ್ಷದಿಂದ ಈ ನರಕ ಯಾತನೆಯನ್ನು ಅನುಭವಿಸುತ್ತಿದ್ದಾರೆ, ಆದರೆ ಸಂಬಂಧಪಟ್ಟ ಅಧಿಕಾರಿಗಳು, ಪಟ್ಟಣ ಪಂಚಾಯಿತಿ ಸದಸ್ಯರು, ಮಾತ್ರ ಸಾರ್ವಜನಿಕರಿಗೆ ಮತ್ತು ಶಾಲಾ ಕಾಲೇಜ್ ಗೆ ಹೋಗುವ ವಿದ್ಯಾರ್ಥಿಗಳಿಗೆ ಓಡಾಡಲು ಈ ರಸ್ತೆಯನ್ನು ಸ್ವಚ್ಚ ಮಾಡಿಕೊಡಲು ಮುಂದಾಗುತ್ತಿಲ್ಲ ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಮತ್ತು 8 ನೇ ವಾರ್ಡನ ಪಟ್ಟಣ ಪಂಚಾಯಿತಿ ಸದಸ್ಯರು, ಕೂಡಲೇ ಸಾರ್ವಜನಿಕರಿಗೆ ವಿಧ್ಯಾರ್ಥಿಗಳಿಗೆ , ಈ ರಸ್ತೆಯನ್ನು ಸ್ವಛತೆ ರಸ್ತೆಯನ್ನಾಗಿ ನಿರ್ಮಾಣ ಮಾಡಿಕೊಡಬೇಕೆಂದು ಬಿಜೆಪಿ ಒ ಬಿ ಸಿ ಘಟಕದ ಅಧ್ಯಕ್ಷ ಎಂ ಚಂದ್ರಶೇಖರ್ ಮಾತನಾಡಿ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಚೇತನ್, ಪ್ರಕಾಶ್, ಬಾಲರಾಜ ಇತರರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!