ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಹೈಕೋರ್ಟ್ ಎಸ್ಐಟಿಗೆ ಸೂಚನೆ ನೀಡಿದೆ. ಸಿಬಿಐ ಈವರೆಗೆ ಬ್ಯಾಂಕ್ ವಿಚಾರಕ್ಕೆ ಸೀಮಿತವಾಗಿ ತನಿಖೆ ನಡೆಸುತ್ತಿತ್ತು. ಇನ್ನು, ಸಿಬಿಐನಿಂದ ಪ್ರಕರಣದ ತನಿಖೆ ಸಮಗ್ರ ತನಿಖೆ ಕೋರಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ ಜಾರಕಿಹೊಳಿ, ಮಾಜಿ ಶಾಸಕರಾದ ಅರವಿಂದ ಲಿಂಬಾವಳಿ ಮತ್ತು ಕುಮಾರ್ ಬಂಗಾರಪ್ಪ ಅವರು ರಿಟ್ ಅರ್ಜಿ ಸಲ್ಲಿಸಿದ್ದರು.
ಎಲ್ಲಿಗೆಲ್ಲಾ ವರ್ಗಾವಣೆಯಾಗಿತ್ತು ಹಣ?
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ 187 ಕೋಟಿ ರೂ. ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂದು ಬಹಿರಂಗವಾಗಿತ್ತು. 187 ಕೋಟಿ ರೂಪಾಯಿಯಲ್ಲಿ 94 ಕೋಟಿ ಹೈದರಾಬಾದ್ ಬ್ಯಾಂಕ್ಗೆ ಅಂದರೆ, ಹೈದರಾಬಾದ್ನ ಫಸ್ಟ್ ಬ್ಯಾಂಕ್ಗೆ ವರ್ಗಾಯಿಸಲಾಗಿತ್ತು. ಫಸ್ಟ್ ಬ್ಯಾಂಕ್ನ ಭರ್ತಿ 18 ನಕಲಿ ಖಾತೆಗಳಿಗೆ 94 ಕೋಟಿ ರೂಪಾಯಿ ವರ್ಗಾವಣೆ ಆಗಿತ್ತು. ಇದೆಲ್ಲವೂ ಮಾಜಿ ಸಚಿವ ನಾಗೇಂದ್ರ ಆಪ್ತ ನೆಕ್ಕಂಟಿ ನಾಗರಾಜ್ ಹಾಗೂ ಆಂಧ್ರದ ನಾಗೇಶ್ವರ್ ರಾವ್ ಸೂಚನೆಯಂತೆ ವರ್ಗಾವಣೆಯಾಗಿತ್ತು.
ವರದಿ : ಜಿಲಾನಸಾಬ್ ಬಡಿಗೇರ್



















