ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಉಪ್ಪಾರಹಳ್ಳಿ ಗ್ರಾಮದಲ್ಲಿ 45 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ

ಬಳ್ಳಾರಿ/ ಕಂಪ್ಲಿ : ತಾಲೂಕಿನ ಮೆಟ್ರಿ ಗ್ರಾಪಂಯ ಉಪ್ಪಾರಹಳ್ಳಿ ಗ್ರಾಮದ ಎಚ್‌ಎಲ್‌ಸಿ ಕಾಲುವೆ ಬಳಿಯ ಕಮಲಾಪುರ ರಸ್ತೆಯಲ್ಲಿರುವ ನೂತನ ಬಡಾವಣೆಯಲ್ಲಿ ನೆಲೆಸಿರುವ ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ಬುಧವಾರ ಶಾಸಕ ಜೆ.ಎನ್.ಗಣೇಶ ಸಮ್ಮುಖದಲ್ಲಿ ವಿತರಿಸಲಾಯಿತು.
ನಂತರ ಶಾಸಕ ಜೆ.ಎನ್.ಗಣೇಶ ಮಾತನಾಡಿ, ಹಲವು ವರ್ಷಗಳಿಂದ ಹಕ್ಕು ಪತ್ರದ ಸಮಸ್ಯೆ ಇಲ್ಲಿನ ಕುಟುಂಬಗಳಿಗೆ ಕಾಡುತ್ತಿತ್ತು. ಆದರೆ, ಈಗ ಕಾಲ ಕೂಡಿ ಬಂದಿದ್ದು, ಇಲ್ಲಿನ 75 ಕುಟುಂಬಗಳ ಪೈಕಿ, ಈಗ 45 ಕುಟುಂಬಗಳಿಗೆ ಹಕ್ಕು ಪತ್ರ ನೀಡಿದ್ದು, ಇನ್ನುಳಿದ ಹಕ್ಕುಪತ್ರಗಳನ್ನು ಕೆಲವೇ ದಿನದಲ್ಲಿ ವಿತರಿಸಲಾಗುವುದು. ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕು ಸುಂದರವಾಗಿರಬೇಕು. ಈ ನಿಟ್ಟಿನಲ್ಲಿ ಹಲವು ವರ್ಷಗಳ ಕನಸು ನನಸಾದಂತಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ನಾಗಮ್ಮ, ಪಿಡಿಒ ಬೀರಲಿಂಗ, ಕಾರ್ಯದರ್ಶಿ ಹುಲುಗಪ್ಪ, ಮುಖಂಡರಾದ ಹನುಮಗೌಡ, ಎಂ.ಜಡೆಪ್ಪ, ಜಗದೀಶ, ಕುಮಾರಸ್ವಾಮಿ, ಎನ್.ಗಿರೀಶ್, ದೇವೇಂದ್ರಪ್ಪ, ಹೊನ್ನಳ್ಳಿ ಗಂಗಾಧರ, ಯು.ತಿಮ್ಮಪ್ಪ, ಹನುಮಮ್ಮ, ಜಯಲಕ್ಷಿ, ಸಿ.ಡಿ.ಗುಂಡಮ್ಮ ಸೇರಿದಂತೆ ಅನೇಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!