ಬಳ್ಳಾರಿ/ ಕಂಪ್ಲಿ : ಪಟ್ಟಣದ ತಹಸಿಲ್ದಾರ್ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಸರ್ಕಾರದಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳಿಗೆ ಬಿಡುಗಡೆಯಾದ ಲ್ಯಾಪ್ ಟಾಪ್ಗಳನ್ನು ಶಾಸಕ ಜೆ.ಎನ್.ಗಣೇಶ ಇವರು ಬುಧವಾರ ವಿತರಿಸಿದರು.
ನಂತರ ಶಾಸಕ ಗಣೇಶ ಅವರು ಮಾತನಾಡಿ, ಸರ್ಕಾರದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಕಾರ್ಯವೈಕರಿ ಹೆಚ್ಚಿಸುವ ಮತ್ತು ಅವರು ಡಾಟಾ ಎಂಟ್ರಿ ಮಾಡಲು ಅನುಕೂಲದ ಹಿತದೃಷ್ಟಿಯಿಂದ ಲ್ಯಾಪ್ಟಾಪ್ಗಳನ್ನು ನೀಡಿದೆ. ಈ ಯೋಜನೆಯ ಸದುಪಯೋಗದೊಂದಿಗೆ ಜನರ ಸೇವೆಯನ್ನು ಅತಿ ವೇಗದಲ್ಲಿ ಮಾಡಲು ಮುಂದಾಗಬೇಕು ಎಂದರು.
ಇಲ್ಲಿನ 13 ಜನ ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಕೆ.ಎಸ್.ಚಾಂದ್ಬಾಷಾ, ಸಿ.ಆರ್.ಹನುಮಂತ, ತಹಶೀಲ್ದಾರ್ ಮಂಜುನಾಥ ನಾಯಕ, ಉಪ ತಹಶೀಲ್ದಾರ್ ಬಿ.ರವೀಂದ್ರಕುಮಾರ, ಆರ್ಐ ಜಗದೀಶ್, ಶಿರಸ್ತೇದಾರ ರಮೇಶ ಸೇರಿದಂತೆ ಮುಖಂಡರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















