ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಡಕಲೂರಿನಲ್ಲಿ ದಲಿತ ಮುಖಂಡರೊಂದಿಗೆ ಸಭೆ ನಡೆಸಿದರು.
ದಲಿತ ಮುಖಂಡರನ್ನು ಪೊಲೀಸ್ ಠಾಣೆಗೆ ಕರೆಸಿ ಸಭೆ ನಡೆಸುವುದು ವಾಡಿಕೆಯಾಗಿತ್ತು ಆದರೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಆರಕ್ಷಕರ ಠಾಣೆ ವ್ಯಾಪ್ತಿಗೆ ಬರುವ ತಡಕಲೂರಿನಲ್ಲಿ ದಲಿತರ ಕೇರಿಗಳಿಗೆ ಹೋಗಿ ಕುಂದು ಕೊರತೆಗಳನ್ನು ವಿಚಾರಿಸಿದರು ದಲಿತರ ಕಾಲೋನಿಗಳಿಗೆ ಹೋಗಿ ನೆಲದ ಮೇಲೆ ಕುಳಿತು ಪೊಲೀಸರು ದಲಿತರ ಕುಂದು ಕೊರತೆಗಳನ್ನು ವಿಚಾರಿಸಿ ನಿಮ್ಮೊಂದಿಗೆ ನಾವಿದ್ದೇವೆ ಕಾನೂನು ಇದೆ ಹೆದರಬೇಡಿ ಎಂದು ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಗ್ರಾಮದ ದಲಿತ ಮುಖಂಡರು, ಗ್ರಾಮದ ಹಿರಿಯ ನಾಗರಿಕರು ಹಾಗೂ ಯುವಕರು ಭಾಗವಹಿಸಿದ್ದರು.
ವರದಿ ಕೊಟ್ಟ ಕರಿಯಣ್ಣ



















