ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯ ಆರು ಪ್ರಮುಖ ವೈದ್ಯರನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿತ್ತು . ಇಂದು ಆಸ್ಪತ್ರೆಯ ವೈದ್ಯರ ವರ್ಗಾವಣೆ ತಿಳಿದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರವರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ದೂರವಾಣಿ ಕರೆ ಮಾಡಿ ಆಸ್ಪತ್ರೆಯ ಸ್ಥಿತಿ ಗತಿ ಹಾಗೂ ರೋಗಿಗಳಿಗೆ ಆಗುವ ತೊಂದರೆಯನ್ನು ವಿವರಿಸಿ ವೈದ್ಯರ ಅವಶ್ಯಕತೆ ಬಗ್ಗೆ ಹೇಳಿ, ವೈದ್ಯರ ವರ್ಗಾವಣೆ ತಡೆಹಿಡಿಯುವಂತೆ ಮನವಿ ಮಾಡಿದರು. ಈಗಾಗಲೇ ಆರಗ ಜ್ಞಾನೇಂದ್ರ ಮನವಿ ಮಾಡಿದ್ದು, ಮನವಿಯನ್ನು ಸರ್ಕಾರ ತಿರಸ್ಕರಿಸುತ್ತಾ ಅಥವಾ ಪುರಸ್ಕರಿಸುತ್ತಾ ಎಂದು ಕಾದು ನೋಡಬೇಕು.
ವರದಿ : ಪ್ರಸಾದ್ ಹೆಚ್. ಬಿ, ತೀರ್ಥಹಳ್ಳಿ.



















