ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹೆಲ್ಮೆಟ್ ಜಾಗೃತಿ ಅಭಿಯಾನಕ್ಕಾಗಿ 5300 ಕಿ. ಮೀ ಬೈಕ್ ರೈಡಿಂಗ್ ಅಭಿನಂದನೀಯ : ಎಸ್ ಪಿ ಶೋಭಾರಾಣಿ

ಬಳ್ಳಾರಿ : ನಮ್ಮ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಪೊಲೀಸ್ ಮುಖ್ಯ ಪೇದೆ ರಮೇಶ್ ಕುಮಾರ ಮತ್ತು ಅವರ ಇತರೆ ಮೂರು ಜನ ಗೆಳೆಯರೊಂದಿಗೆ ಸುಮಾರು 5300 ಕಿಲೋಮೀಟರ್ ಗಳ ಬೈಕ್ ರೈಡಿಂಗ್ ನಿಂದ ಇಡೀ ದೇಶಾದಾದ್ಯಂತ ಸಂಚರಿಸಿ ಹೆಲ್ಮೆಟ್ ಜಾಗೃತಿ ಅಭಿಯಾನವನ್ನು ಮೂಡಿಸಿದ ಕಾರ್ಯ ಶ್ಲಾಘನೀಯ ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಶೋಭಾರಾಣಿ ವಿ ಜೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬಳ್ಳಾರಿಯಿಂದ ಜೂನ್ 17ಕ್ಕೆ ತಮ್ಮ ಸ್ನೇಹಿತರಾದ ವಿಕ್ರಾಂತ್ ರೆಡ್ಡಿ, ಸತೀಶ್ ಬೊಮ್ಮರೆಡ್ಡಿ, ಆಡಿಟರ್ ರಘು ಇವರುಗಳೊಂದಿಗೆ ಬಿಟ್ಟು ಡೆಲ್ಲಿಯ ಪ್ರವೀಣ್ ರಾಮಕೃಷ್ಣ ಅವರನ್ನು ಒಳಗೊಂಡು ಶ್ರೀನಗರ ಜಮ್ಮು ಕಾಶ್ಮೀರ, ಲೇಲಡಾಕ್, ಕುಲು ಮನಾಲಿ, ಡೆಲ್ಲಿ ಉತ್ತರ ಪ್ರದೇಶ ಮಧ್ಯಪ್ರದೇಶ ಪಂಜಾಬ್ ಸೇರಿದಂತೆ ಸುಮಾರು 12 ರಾಜ್ಯಗಳ ಮೂಲಕ ತಮ್ಮ ಸುದೀರ್ಘ ಪಯಣವನ್ನು ನಡೆಸಿದ ಅವರು ಎಲ್ಲಾ ರಾಜ್ಯಗಳಲ್ಲಿ ಹೆಲ್ಮೆಟ್ ಕುರಿತು ಜಾಗೃತಿ ಅಭಿಯಾನವನ್ನು ನಡೆಸಿ, ಹೆಲ್ಮೆಟ್ ನಿಂದ ತಮ್ಮ ಮತ್ತು ತಮ್ಮ ಕುಟುಂಬಗಳನ್ನು ರಕ್ಷಿಸಿಕೊಳ್ಳಿ ಹೆಲ್ಮೆಟ್ ಕೇವಲ ಪೊಲೀಸರ ಭಯದಿಂದ ಹಾಕಿಕೊಳ್ಳಬೇಡಿ, ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ರಕ್ಷಿಕೊಳ್ಳಲು ತಪ್ಪದೇ ಹೆಲ್ಮೆಟನ್ನು ಹಾಕಿಕೊಳ್ಳಿ ಎಂದು ಸಾರ್ವಜನಿಕರಿಗೆ ಹೆಲ್ಮೆಟ್ ಬಗ್ಗೆ ತಿಳಿಸಿ ಜಾಗೃತಿ ಮೂಡಿಸುವಂತಹ ಕೆಲಸ ಮಾಡಿದ್ದಾರೆ.

ತಮ್ಮ 5,300 ಕಿ.ಮೀಗಳ ಸುದೀರ್ಘ ಪಯಣವನ್ನು ಅಂತ್ಯಗೊಳಿಸಿ ಬಳ್ಳಾರಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಗೆ ನೇರವಾಗಿ ಬಂದು ಪೊಲೀಸ್ ವರಿಷ್ಟಾಧಿಕಾರಿಗಳಾದ ಶೋಭರಾಣಿ ಅವರನ್ನು ಭೇಟಿಯಾದರು.
ಈ ಸಂದರ್ಭದಲ್ಲಿ ರಮೇಶ್ ಅವರನ್ನು ಬರಮಾಡಿಕೊಂಡ ಎಸ್. ಪಿ. ಯವರು ರಮೇಶರವರನ್ನು ಸನ್ಮಾನಿಸಿ ಮಾತನಾಡಿ, ನಮ್ಮ ಬಳ್ಳಾರಿ ಜಿಲ್ಲೆಯಲ್ಲಿ ಇಲಾಖೆಯಿಂದ ಹೆಲ್ಮೆಟ್ ಜಾಗೃತಿ ಅಭಿಯಾನವನ್ನು ಕಳೆದ ಒಂದು ತಿಂಗಳಿನಿಂದ ನಡೆಸಲಾಗುತ್ತಿದೆ, ಇದರ ಪ್ರೇರಣೆಯಿಂದಾಗಿ ರಮೇಶ ಅವರು ಇಡೀ ದೇಶಾದ್ಯಂತ ಹೆಲ್ಮೆಟ್ ಜಾಗೃತಿ ಅಭಿಯಾನವನ್ನು ಕೊಂಡೊಯ್ಯಬೇಕೆಂದು ನಮ್ಮಿಂದ ಅನುಮತಿಯನ್ನು ಪಡೆದುಕೊಂಡು ದೇಶಾದ್ಯಂತ ಸುಮಾರು 5300 ಕಿಲೋಮೀಟರುಗಳನ್ನು ತಿರುಗಿ ಹೆಲ್ಮೆಟ್ ಜಾಗೃತಿ ಮೂಡಿಸಿದ್ದಾರೆ. ಅವರ ಈ ಸಾರ್ವಜನಿಕರ ಕಳಕಳಿ ಮೆಚ್ಚುವಂಥದ್ದು ಎಂದು ಅವರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್, ನನಗೆ ಬೈಕ್ ರೈಡಿಂಗ್ ಹವ್ಯಾಸ ಮೊದಲಿಂದಲೂ ಇತ್ತು. ಅದನ್ನು ಅರ್ಥಪೂರ್ಣವಾಗಿ ನಡೆಸಬೇಕೆಂಬ ಉದ್ದೇಶದಿಂದ ನಮ್ಮ ಎಸ್ ಪಿ ಮೇಡಂ ಅವರು ಹಮ್ಮಿಕೊಂಡ ಹೆಲ್ಮೆಟ್ ಜಾಗೃತಿ ಅಭಿಯಾನವನ್ನು ನನ್ನ ಬೈಕ್ ರೈಡಿಂಗ್ ಜೊತೆ ಕೊಂಡೊಯ್ದು, ಇಡೀ ನನ್ನ ಪ್ರಯಾಣದುದ್ದಕ್ಕೂ ಹೆಲ್ಮೆಟ್ ಕುರಿತು ಜಾಗೃತಿ ಮೂಡಿಸಲು ಪ್ರಯತ್ನಪಟ್ಟಿದ್ದೇನೆ, ಬೈಕ್ ರೈಡಿಂಗ್ ಅಭ್ಯಾಸ ಇರುವ ಎಲ್ಲರೂ ಕೂಡಾ ಹೀಗೆ ಒಂದು ಸಾಮಾಜಿಕ ಕಳಕಳಿಯನ್ನು ಇಟ್ಟುಕೊಂಡು ಬೈಕ್ ರೈಡಿಂಗ್ ಮಾಡಿದಲ್ಲಿ ತಮಗೂ ಮತ್ತು ಸಮಾಜಕ್ಕೂ ಅನುಕೂಲವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಆಡಿಷನಲ್ ಎಸ್. ಪಿ.ಯಾದ ಕೆ. ಪಿ. ರವಿಕುಮಾರ್ ಅವರು ಸದೃಢ ಮನಸಿದ್ದರೆ ಮಾತ್ರ ಈ ರೀತಿಯ ಸಾಧನೆ ಸಾಧ್ಯ ಎಂದು ಸನ್ಮಾನಿಸಿ ಮಾತನಾಡಿದರು.
ಇಲಾಖೆಯ ಹಿರಿಯ ಅಧಿಕಾರಿಗಳಾದ
ನವೀನ್ ಕುಮಾರ್, ಜಿ ಎಂ ತಿಪ್ಪೇಸ್ವಾಮಿ ಹಾಗೂ ಸ್ನೇಹಿತರಾದ ಜೆ.ವಿ. ಮಂಜುನಾಥ್ ವಿರುಪಾಕ್ಷಯ್ಯ, ರಮೇಶ್ ಧರ್ಮ ಪತ್ನಿ ಸುಮಾ ರಮೇಶ್, ಸುನಿಲ್ ಕುಮಾರ್, ಚಂದ್ರಶೇಖರ್ ಡಾ. ನಾಗರಾಜ್ ಬಸರಕೋಡು, ಶಬ್ಬೀರ್, ಮೌಲಾಸಾಬ್, ಗೋವಿಂದರಾಜ್, ಮಾಜಿ ಸೈನಿಕ ಈಶ್ವರ ರೆಡ್ಡಿ ಮತ್ತು ಇತರರು ಸೇರಿದಂತೆ ಹಲವಾರು ಇದ್ದರು.

ವರದಿ: ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!