ಯಾದಗಿರಿ :ಜಿಲ್ಲೆಯ ವಡಗೇರಾ ಪಟ್ಟಣದ 22 ವರ್ಷದ ಮಹೆಬೂಬ್ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದು, ಆತನ ತಂದೆ 50 ವರ್ಷದ ಸೈಯದ್ ಅಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ಒಂದು ವಾರದ ಹಿಂದೆ ಜಮೀನಿನಲ್ಲಿ ದಾರಿ ವಿಚಾರವಾಗಿ ಮಹೆಬೂಬ್ ದಲಿತ ಕುಟುಂಬವೊಂದರೊಂದಿಗೆ ಜಗಳವಾಡಿದ್ದ ಎನ್ನಲಾಗಿದೆ. ಈ ಜಗಳವನ್ನು ಹಿರಿಯರು ನ್ಯಾಯ ಪಂಚಾಯಿತಿ ಮೂಲಕ ಬಗೆಹರಿಸಿದ್ದರು.
ಆದರೆ, ಬೇರೆ ಊರಿನಿಂದ ಬಂದ ದಲಿತ ಮುಖಂಡನೊಬ್ಬ ಮಹೆಬೂಬ್ ವಿರುದ್ಧ ಜಾತಿ ನಿಂದನೆ ಕೇಸ್ ದಾಖಲಿಸಲು ಮುಂದಾಗಿದ್ದಾನೆ. “ಜಾತಿ ನಿಂದನೆ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸುತ್ತೇನೆ” ಎಂದು ಆ ಮುಖಂಡ ಮಹೆಬೂಬ್ಗೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಆತ್ಮಹತ್ಯೆ ಮತ್ತು ತಂದೆಯ ಸಾವು ಈ ಬೆದರಿಕೆಯಿಂದ ವಿಚಲಿತನಾದ ಮಹೆಬೂಬ್, ಕೇಸ್ ದಾಖಲಾದರೆ ಮಾನ ಮರ್ಯಾದೆ ಹೋಗುತ್ತದೆ ಮತ್ತು ಜೈಲಿಗೆ ಹೋಗಬೇಕಾಗುತ್ತದೆ ಎಂದು ಹೆದರಿ, ನಿನ್ನೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನ ಆತ್ಮಹತ್ಯೆ ಸುದ್ದಿ ಕೇಳಿ ತೀವ್ರ ಆಘಾತಕ್ಕೆ ಒಳಗಾದ ತಂದೆ ಸೈಯದ್ ಅಲಿ ಅವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಅವರನ್ನು ಕಲಬುರಗಿಯ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ, ಚಿಕಿತ್ಸೆ ಫಲಕಾರಿಯಾಗದೆ ಸೈಯದ್ ಅಲಿ ಕೂಡಾ ಸಾವನ್ನಪ್ಪಿದ್ದಾರೆ.
ಈ ಘಟನೆ ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವರದಿ: ಜಗದೀಶ್ ಕುಮಾರ್ ಭೂಮಾ



















