ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಳಬಾಗಿಲು ಫುಡ್ ಬ್ಯಾಂಕ್

ಹಸಿದವರಿಗೆ ಅನ್ನನೀಡುವ ಕಾಯಕದಲ್ಲಿ ಕಳೆದ 3 ವರ್ಷಗಳಿಂದ ತೊಡಗಿಸಿಕೊಂಡಿರುವ ಮುಳಬಾಗಿಲು ಫುಡ್ ಬ್ಯಾಂಕ್ ಅಧ್ಯಕ್ಷ ಎಂ.ಬಿ.ಕೃಷ್ಣಮೂರ್ತಿ ಇತರರಿಗೆ ಮಾದರಿಯಾಗಿದ್ದಾರೆ.

ಮುಳಬಾಗಲು ಫುಡ್ ಬ್ಯಾಂಕ್ ಸ್ಥಾಪನೆ ಮಾಡಿ ಮಧುವೆಗಳಲ್ಲಿ ವಿವಿಧ ನಡೆಯುವ ಕಾರ್ಯಕ್ರಮಗಳಲ್ಲಿ ಹೋಟಲ್ ಗಳಲ್ಲಿ ಹಾಗೂ ಮನೆಗಳಲ್ಲಿ ಉಳಿಯುವ ಆಹಾರವನ್ನು ಪಡೆದು ಆಸ್ಪತ್ರೆ, ಬಸ್ ನಿಲ್ದಾಣಗಳಲ್ಲಿ, ರಸ್ತೆ ಬದಿಗಳಲ್ಲಿ ಇರುವ ನಿಗರ್ತಿಕರಿಗೆ ಹಾಗೂ ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ಮತ್ತು ದೇವಾಲಯಗಳ ಮುಂಭಾಗ ಕುಳಿತುಕೊಳ್ಳುವ ಭಿಕ್ಷಕರಿಗೆ ನೀಡುವ ಕಾಯಕದಲ್ಲಿ ಕೃಷ್ಣಮೂರ್ತಿ ತೊಡಗಿಸಿಕೊಂಡಿದ್ದಾರೆ.

ಹಸಿದ ಹೊಟ್ಟೆಯನ್ನು ತುಂಬಿಸುವ ಕೆಲಸವನ್ನು ಸ್ವಯಂ ಪ್ರೇರಿತವಾಗಿ ಮಾಡುತ್ತಿದ್ದಾರೆ. ಯಾವುದೇ ಕಾರ್ಯಕ್ರಮದಲ್ಲಿ ಉಳಿಯುವ ಆಹಾರವನ್ನು ಪಡೆದು ಅದು ವ್ಯರ್ಥವಾಗದಂತೆ ಆ ದಿನವೇ ಹಸಿದವರಿಗೆ ನೀಡಿ ಸಾರ್ಥಕತೆ ಮೆರೆಯುತ್ತಿದ್ದಾರೆ. ಅನೇಕ ಜನ ಹಸಿವಿನಿಂದ ನರಳಿ ಸಾವಿಗೀಡಾದ ಪ್ರಕರಣಗಳೂ ಆಗಾಗ್ಗೆ ವರದಿ ಆಗುತ್ತಲೇ ಇರುತ್ತವೆ. ಈ ನಿಟ್ಟಿನಲ್ಲಿ ವ್ಯರ್ಥವಾಗುವ ಆಹಾರವನ್ನು ಹಸಿದವರಿಗೆ ನೀಡುವ ಕಾರ್ಯ 7 ವರ್ಷಗಳ ಹಿಂದೆ ಶುರುವಾಗಿದ್ದು, ಇದೀಗ ಈ ಬಗ್ಗೆ ಸಾರ್ವಜನಿಕರಲ್ಲಿ ಕೂಡಾ ಅರಿವು ಮೂಡುತ್ತಿದೆ. ಹೀಗಾಗಿ ಸಮಾರಂಭಗಳಲ್ಲಿ ಉಳಿದ ಆಹಾರವನ್ನು ಅಗತ್ಯವಿರುವರಿಗೆ ನೀಡಲು ಅನೇಕರು ಮುಂದಾಗಿ

ಯಾವುದೇ ಮನೆಯಲ್ಲಿ ಕಾರ್ಯಕ್ರಮಗಳಲ್ಲಿ ಹೋಟಲ್‌ಗಳಲ್ಲಿ, ಮದುವೆ ಕಾರ್ಯದಲ್ಲಿ ಆಹಾರ ಉಳಿದಿದ್ದರೆ ಕೂಡಲೇ ಮುಳಬಾಗಿಲು ಫುಡ್ ಬ್ಯಾಂಕ್‌ಗೆ ಕರೆ ಮಾಡಿದರೆ ನಾವೇ ಸ್ಥಳಕ್ಕೆ ಬಂದು ಆಹಾರವನ್ನು ಪಡೆಯುತ್ತೇವೆ. ಹೆಚ್ಚಿನ ವಿವರಗಳಿಗೆ 9036650020

ಆಹಾರದ ಮಹತ್ವದ ಬಗ್ಗೆ ಅರಿವು ಇರಲಿ:

ಆಹಾರದ ಬಗ್ಗೆ ಜನಗಳಲ್ಲಿ ತಿಳಿವಳಿಕೆ ಕಡಿಮೆ ಇದೆ. ಪ್ರತಿಷ್ಠೆಗೋಸ್ಕರ ತಟ್ಟೆ ತುಂಬಾ ಬಡಿಸಿಕೊಂಡು ಕೇವಲ ಎರಡು, ಮೂರುತುತ್ತು ತಿಂದು ಹಾಗೇ ಬಿಟ್ಟು ಹೋಗುತ್ತಾರೆ. ಇದರಿಂದ ಬಹಳಷ್ಟು ಪೋಲಾಗುತ್ತದೆ.

ಆಹಾರವನ್ನು ಗೌರವಿಸಬೇಕು. ಎಷ್ಟೋ ಜನ ಊಟ ಸಿಗದೆ ಹಸಿವಿನಿಂದ ಬಳಲಿ ಸಾವಿಗೀಡಾಗುತ್ತಿದ್ದಾರೆ ಎಂದು ಎಂ.ಬಿ.ಕೃಷ್ಣಮೂರ್ತಿ ಹೇಳುತ್ತಾರೆ. ಬೇಸಿಗೆಯಲ್ಲಿ ಬಹು ಬೇಗ ಆಹಾರ ಕೆಡುವುದರಿಂದ ಉಳಿದ ತಕ್ಷಣ ಹಸಿದವರಿಗೆ ನೀಡದರೆ ಮಾತ್ರ ಸಾರ್ಥಕ ವಾಗುತ್ತದೆ ಎಂಬ ಮನೋಭಾವನೆಯನ್ನು ಹೊಂದಿರುವ ಇವರು ಹಸಿದವರಿಗೆ ಅನ್ನ ನೀಡುವ ಕಾರ್ಯದಲ್ಲಿ ಪ್ರತಿನಿತ್ಯ ತೊಡಗಿಸಿಕೊಂಡಿದ್ದಾರೆ.

ಆಹಾರ ಸರಬರಾಜು ಮಾಡಲು ತಟ್ಟೆ ಲೋಟಗಳಿಗಾಗಿ ತಿಂಗಳಿಗೆ 10 ಸಾವಿರ ರೂ. ಖರ್ಚು ಆಗುತ್ತದೆ. ಜತೆಗೆ ಒಂದಿಷ್ಟು ಜನ ಕೆಲಸದವರೂ ಇದ್ದಾರೆ. ಗ್ರಾಮ ಭಾರತಿ ಟ್ರಸ್ಟ್ ನಾನಾ ಆಸ್ಪತ್ರೆಗಳ ಸಹಯೋಗದೊಂದಿಗೆ ಉಚಿಕ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸುವ

ಅಂಗಾಂಗ ದಾನ: ಎಂ. ಬಿ. ಕೃಷ್ಣಮೂರ್ತಿ

ಮತ್ತು ಇವರ ತಾಯಿ ಗುರಮ್ಮ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜೀವ ಸಾರ್ಥಕತೆ ಕೇಂದ್ರದಲ್ಲಿ ಅಂಗಾಂಗ ದಾನ ಪ್ರತಿಜ್ಞೆ, ಮಾಡಿ ಪತ್ರಕ್ಕೆ ಸಹಿ ಹಾಕಿದ್ದಾರೆ. ತಾವು ಸತ್ತನಂತರ ಹೂಳುವುದಾಗಲಿ, ಸುಡುವುದಾಗಲಿ ಬೇಡ. ಮತ್ತೊಬ್ಬರ ಪ್ರಾಣ ಉಳಿಯಲ್ಲಿ ನಾವು ಸತ್ತರು ನಮ್ಮ ಅಂಗಾಂಗ ಸಜೀವವಾಗಿರಲಿ ಎಂದು ತಿಳಿಸಿದ್ದಾರೆ.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!