
ಬಾಗಲಕೋಟೆ : ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ನಲ್ಲಿರುವ ಪಾಂಡುರಂಗ ದೇವಸ್ಥಾನದಲ್ಲಿ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿಯನ್ನು ಆಚರಿಸಲಾಯಿತು.
ಹಡಪದ ಅಪ್ಪಣ್ಣನವರ 891 ನೇ ಜಯಂತಿಯಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ರೇವಣ ಸಿದ್ದಯ್ಯ ಸ್ವಾಮಿ ಹಿರೇಮಠ ಅವರು ವಚನಗಳ ಮೂಲಕ ಕಾಯಕದ ಮಹತ್ವ ತಿಳಿಸಿ, ಸಮಾನತೆಯ ಸಂದೇಶ ಸಾರಿದ ಹಡಪದ ಅಪ್ಪಣ್ಣನವರು ವೈಚಾರಿಕ ಪ್ರಜ್ಞೆಯ ಶಿವಶರಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾ. ಪಂ. ಸದಸ್ಯರು ಹನಮಂತ ನರಗುಂದ ಮಾತನಾಡಿ ಹಡಪದ ಅಪ್ಪಣ್ಣನವರು ಕಾಯಕವನ್ನೇ ತಮ್ಮ ಜೀವನವನ್ನಾಗಿಸಿಕೊಂಡಿದ್ದರು, ಎಲ್ಲರೂ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ದ್ಯಾಮಣ್ಣ ಹಡಪದ, ಅಪ್ಪಣ್ಣ ಹಡಪದ, ಪ್ರವೀಣ ಬೂದಿಹಾಳ, ಗುರುನಾಥ ಹುನಗುಂದ , ಪ್ರಕಾಶ ಹುನಗುಂದ, ಆರ್. ಎಸ್. ಹಿರೇಮಠ, ಎಚ್. ಎಚ್. ಡಂಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ : ನಿಂಬಯ್ಯ ಕುಲಕರ್ಣಿ, ಬಾದಾಮಿ



















