ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನಿಧನ ವಾರ್ತೆ :ಮಡಬೂರು ರಾಜೇಂದ್ರ

ಶೃಂಗೇರಿ ಕ್ಷೇತ್ರ ಕಂಡ ಪ್ರತಿಭಾವಂತ ರಾಜಕೀಯ ಮುತ್ಸದ್ದಿ, ಧೀಮಂತ ರಾಜಕಾರಣಿ, ಸಾಮಾಜಿಕ ಕಳಕಳಿಯ ಮಡಬೂರು ರಾಜೇಂದ್ರ ಅವರು ಇಂದು ಕಾಲನ ಕರೆಗೆ ತಲೆಬಾಗಿದ್ದಾರೆ. ನರಸಿಂಹರಾಜಪುರ ವನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಯಶಸ್ವಿಯಾಗಿ ಮುನ್ನಡೆಸಿದ ರಾಜೇಂದ್ರ, ಶೃಂಗೇರಿ ಕ್ಷೇತ್ರದ ಉದ್ದಗಲಕ್ಕೂ ಸಂಚರಿಸಿ ಜನರ ಭಾವನೆಗಳಿಗೆ ಸ್ಪಂದಿಸಿದವರು, ರಾಜ್ಯ ಜನತಾದಳದ ಉಪಾಧ್ಯಕ್ಷರಾಗಿ ಕೆಲಸ ಮಾಡಿದವರು, ಶೃಂಗೇರಿ ಜನತಾದಳದ ಅಭ್ಯರ್ಥಿಯಾಗಿ ಸ್ಪರ್ಧಿಸಿದವರು. ನಾಲ್ಕಾರು ಭಾರಿ ಸಹ್ಯಾದ್ರಿ ಸಂಘದ ಕಾರ್ಯಕ್ರಮಗಳಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ನಮ್ಮನ್ನು ಪ್ರೋತ್ಸಾಹಿದವರು ಮತ್ತು ಸಂಘದ ಬಗ್ಗೆ ಅಭಿಮಾನ ಹೊಂದಿದವರು. ಅಧ್ಯಯನಶೀಲರು ಪ್ರಾಮಾಣಿಕರು ಹೋರಾಟಗಾರರು ಆದ ರಾಜೇಂದ್ರ ನಮ್ಮನ್ನು ಅಗಲಿರುವುದು ಮಲೆನಾಡ ಭಾಗಕ್ಕೆ ತೀವ್ರವಾದ ಹೊಡೆತ ಬಿದ್ದಂತಾಗಿದೆ ಮತ್ತು ಜನಪರ ಕಾಳಜಿಯ ವ್ಯಕ್ತಿಯನ್ನು ಕಳೆದುಕೊಂಡು ಮಲೆನಾಡು ಅದರಲ್ಲೂ ವಿಶೇಷವಾಗಿ ಶೃಂಗೇರಿ ಕ್ಷೇತ್ರ ಅನಾಥವಾಗಿದೆ. ರಾಜೇಂದ್ರ ನಿಧನಕ್ಕೆ ಸಹ್ಯಾದ್ರಿ ಸಂಘ ಅಶ್ರುತರ್ಪಣ ಸಲ್ಲಿಸುತ್ತದೆ. ದುಃಖ ತಪ್ತ ಕುಟುಂಬಕ್ಕೆ ಭಗವಂತ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.

ವರದಿ : ಪ್ರಸಾದ್ ಹೆಚ್ ಬಿ ,ತೀರ್ಥಹಳ್ಳಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!