
“ಮನೆ ಮನೆಗೆ ಪೊಲೀಸ್” ಎಂಬ ವಿನೂತನ ಕಾರ್ಯಕ್ರಮವನ್ನು ಮೇಲಾಧಿಕಾರಿಗಳ ಆದೇಶದ ಮೇರೆಗೆ ಬಾಗಲಕೋಟೆ ಜಿಲ್ಲೆ ಬಾದಾಮಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಂದ ಬಾದಾಮಿ ಠಾಣಾ ವ್ಯಾಪ್ತಿಯಲ್ಲಿನ ಆಲದಕಟ್ಟಿ ಗ್ರಾಮದಲ್ಲಿ ಅಭೂತಪೂರ್ವವಾಗಿ ಪ್ರಾರಂಭವಾಯಿತು.
ಈ ಸಂದರ್ಭದಲ್ಲಿ ಮಾನ್ಯ ಸಿಪಿಐ ಬಾದಾಮಿ ಶ್ರೀ ಕರಿಯಪ್ಪ ಬನ್ನೆ ರವರು ಮತ್ತು ಪಿಎಸ್ಐ ಶ್ರೀ ವಿಠ್ಠಲ ನಾಯಕ್ ರವರು, ಎ ಎಸ್ ಐ ಆದ ಶ್ರೀ ಡಿ ಜೆ ಶಿವಪುರ, ಶ್ರೀ ಎಂ ವಾಯ್ ಯಾಳವರ, ಬೀಟ್ ಸಿಬ್ಬಂದಿಯಾದ ಶ್ರೀ ಜಿ ಎಸ್ ಸುನಗದ, ಬಾದಾಮಿ ಠಾಣೆಯ ಸಿಬ್ಬಂದಿ ವರ್ಗದವರು , ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ರಾಜು ಮುಗುಳ್ಕೋಡ್ ರವರು, ಗ್ರಾಮ ಲೆಕ್ಕಾಧಿಕಾರಿಗಳಾದ ಶ್ರೀ ಪ್ರಭುಕುಮಾರ ಕುಂಬಾರ ರವರು ಹಾಗೂ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯರಾದ ಶ್ರೀ ಮತಿ ಹುಲ್ಲಿಕೇರಿ, ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕರ್ತೆಯರು ಗ್ರಾಮದ ಗ್ರಾಮ ಪಂಚಾಯತ್ ಸದಸ್ಯರು ಗ್ರಾಮದ ಮುಖಂಡರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದು ನಂತರ ಗ್ರಾಮದ ಪ್ರತಿ ಮನೆ ಮನೆಗೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಸಾರ್ವಜನಿಕರ ಸಮಸ್ಯೆ ಆಲಿಸಿದರು ಹಾಗೂ ಸ್ಥಳದಲ್ಲಿಯೇ ಬಗೆ ಹರಿಯುವಂತಹ ಸಮಸ್ಯೆಗಳನ್ನು ಬಗೆಹರಿಸಿದ್ದನ್ನು ನೋಡಿ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದರು.
ವರದಿ :ನಿಂಬಯ್ಯ ಕುಲಕರ್ಣಿ, ಬಾದಾಮಿ



















