ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಪಟ್ಟಣದ ಹೊರವಲಯದ ದೇವಲಾಪುರ ರಸ್ತೆಯಲ್ಲಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆಯ ಅವರಣದಲ್ಲಿ 5,50 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸ್ವಯಂ ಚಾಲಿತ ಚಾಲನಾ ಪಥವನ್ನು ಸಾರಿಗೆ ಹಾಗೂ ಮುಜರಾಯಿ ಇಲಾಖೆ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ರಿಬ್ಬನ್ ಕತ್ತರಿಸುವ ಮೂಲಕ ಚಾಲನೆ ನೀಡಿದರು.
ಇದೆ ವೇಳೆ ಬೈಲಹೊಂಗಲ ಮತಕ್ಷೇತ್ರದ ಶಾಸಕರಾದ ಶ್ರೀ ಮಹಾಂತೇಶ ಕೌಜಲಗಿ, ಪುರಸಭೆಯ ಅಧ್ಯಕ್ಷರಾದ ಶ್ರೀ ವಿಜಯ ಶ್ರೀಶೈಲ ಬೋಳನ್ನವರ, ಅಪರ ಸಾರಿಗೆ ಆಯುಕ್ತ ಶ್ರೀ ಬಿ.ಪಿ. ಉಮಾಶಂಕರ್ ಹಾಗೂ ತಹಸಿಲ್ದಾರರಾದ ಶ್ರೀ ಶ್ರೀಕಾಂತ ಸಿರಹಟ್ಟಿ ಬೈಲಹೊಂಗಲ ತಾಲೂಕಿನ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಶ್ರೀ ಜೆ ಬಿ ನರಸಣ್ಣವರ ಎಲ್ಲರನ್ನೂ ಸ್ವಾಗತಿಸುವ ಮೂಲಕ ಕಾರ್ಯಕ್ರಮವನ್ನು ಅದ್ದೂರಿಯಾಗಿ ನೆರವೇರಿಸಿಕೊಟ್ಟರು.
ವರದಿ ಮಂಜು. ಎಂ.ಚಿಕ್ಕಣ್ಣವರ



















