ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಾದಾಮಿ ಪೊಲೀಸ್ ಠಾಣೆಯಿಂದ ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಮನೆ ಮನೆಗೆ ಬರಲಿದೆ ದಂಡ

ಬಾಗಲಕೋಟೆ ಜಿಲ್ಲೆಯ ಬಾದಾಮಿ ಪೊಲೀಸ್ ಠಾಣೆಯ ಸಿ. ಪಿ. ಐ ಕರಿಯಪ್ಪ ಬನ್ನೇ ಹಾಗೂ ಪಿ.ಎಸ್. ಐ.ವಿಠಲ್ ನಾಯಕ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಆದೇಶದಂತೆ ಹೆಲ್ಮೆಟ್ ಹಾಕದೆ ಇನ್ನು ಮುಂದೆ ದ್ವಿಚಕ್ರ ವಾಹನ ಸಂಚಾರ ಮಾಡಿದರೆ ಸ್ಥಳದಲ್ಲಿಯೇ ಜಿ.ಪಿ.ಎಸ್. ಲೊಕೇಶನ್ ಸಹಿತ ಫೋಟೋ ತೆಗೆದು ಇಲಾಖೆಗೆ ಕಳಿಸಿ ವಾಹನದ ನಂಬರ್ ಮೂಲಕ ವಾಹನ ಮಾಲಿಕರ ಮನೆಗೆ ದಂಡದ ರಸೀದಿ ಬಂದು ತಲುಪುತ್ತದೆ. ಈಗಾಗಲೇ ಬಾಗಲಕೋಟೆ ನಗರದಲ್ಲಿ ಈ ನಿಯಮ ಚಾಲನೆಯಲ್ಲಿದ್ದು ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ಸ್ಥಳದಲ್ಲಿಯೇ ಕ್ಯಾಮರಾಗಳು ಫೋಟೋ ಕ್ಲಿಕ್ಕಿಸಿ ದಂಡ ವಿಧಿಸುವ ಕ್ರಮ ಜಾರಿಯಲ್ಲಿದ್ದು ಈಗ ಬಾದಾಮಿ ಪೊಲೀಸ್ ಠಾಣೆ ಇಂದಿನಿಂದ ಸಂಚಾರಿ ನಿಯಮ ಉಲ್ಲಂಘಿಸುವವರಿಗೆ ಮನೆ ಮನೆಗೆ ದಂಡ ತಲುಪಿಸುವ ಕ್ರಮ ಜಾರಿಯಾಗಿದೆ.
ಈ ಬಗ್ಗೆ ಸಾರ್ವಜನಿಕರು ಹಾಗು ದ್ವಿಚಕ್ರ ವಾಹನ ಸವಾರರು ನಮ್ಮ ಜೀವ ಉಳಿಸುವ ಈ ಹೆಲ್ಮೆಟ್ ಧರಿಸದವರಿಗೆ ದಂಡ ವಿಧಿಸುವ ಕ್ರಮ ತಂದಿರುವುದು ಜನರ ಪ್ರಾಣ ರಕ್ಷಣೆ ಮಾಡಿದಂತಾಗುತ್ತದೆ ಈ ಬಗ್ಗೆ ಪೊಲೀಸ್ ಇಲಾಖೆಯ ಈ ಕ್ರಮಕ್ಕೆ ನಮ್ಮ ವಾಹಿನಿಯ ಜೊತೆ ಮಾತನಾಡಿ ಶ್ಲಾಘನೆ ವ್ಯಕ್ತಪಡಿಸಿದರು.

ವರದಿ:ನಿಂಬಯ್ಯ ಕುಲಕರ್ಣಿ, ಬಾದಾಮಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!