ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಾಗಲಕೋಟೆಯಲ್ಲಿ ವಿವಿಧ ಸಂಘಟನೆಗಳ ವತಿಯಿಂದ ಮಲ್ಲಿಕಾರ್ಜುನ ಖರ್ಗೆ ಜನ್ಮ ದಿನಾಚರಣೆ

ಬಾಗಲಕೋಟೆ: ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ, ವಿರೋಧ ಪಕ್ಷದ ನಾಯಕ ಡಾ|ಮಲ್ಲಿಕಾರ್ಜುನ ಖರ್ಗೆ ಅವರ ಹುಟ್ಟು ಹಬ್ಬವನ್ನು ಬಾಗಲಕೋಟೆ ಬ್ಲಾಕ್ ಕಾಂಗ್ರೆಸ್ ಮತ್ತು ವಿವಿಧ ಸಂಘಟನೆಗಳ ವತಿಯಿಂದ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ ಅದ್ದೂರಿಯಾಗಿ ಆಚರಿಸಿದರು.

ಈ ಸಂದರ್ಭದಲ್ಲಿ ವಿವಿಧ ಮುಖಂಡರುಗಳು ಮಾತನಾಡಿ “ ಡಾ| ಮಲ್ಲಿಕಾರ್ಜುನ ಖರ್ಗೆ ಅವರು ಸರಳ ಸಜ್ಜನ ವ್ಯಕ್ತಿ. ಸದಾ ದೀನದಲಿತರ, ಬಡವರ, ರೈತರ, ಕಾರ್ಮಿಕರ ಪರವಾಗಿ ಧ್ವನಿ ಎತ್ತುವ ನಾಯಕರು. ಇಂತಹ ಮಹಾನ್ ನಾಯಕರ ಹುಟ್ಟು ಹಬ್ಬವನ್ನು ಇಂದು ನಾವು ಜಿಲ್ಲಾಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ ಆಚರಿಸಿದ್ದೇವೆ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ದೇಶದ ಪ್ರಧಾನಿಯಾಗಬೇಕೆಂದು ನಮ್ಮೆಲ್ಲರ ಆಶಯ. ದೇವರು ಅವರಿಗೆ ಉತ್ತಮ ಆಯುರ್ ಆರೋಗ್ಯವನ್ನು ನೀಡಿ ಕಾಪಾಡಲಿ” ಎಂದು ಹಾರೈಸಿದರು

ಈ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಬಾಯಲ್ಲಿ ಮೇಟಿ, ಮಲ್ಲಿಕಾರ್ಜುನ ಮೇಟಿ, ಶಫೀಕ ಜಾಮದಾರ, ಈರಣ್ಣ ಹುಂಡೇಕಾರ, ಮನೋಹರ್ ಕದಂ, ರಾಜು ನಾಯ್ಕರ, ದ್ಯಾಮಣ್ಣ ಸುಣಗಾರ, ರಾಜು ಮಣ್ಣಿಕೇರಿ, ಮಹೇಶ ಬೀಳಗಿ, ಪ್ರೇಮನಾಥ ಗರಸಂಗಿ, ಸದಾಶಿವ ಕೊಡಬಾಗಿ, ಗಸ್ತಿ ವಕೀಲರು, ಮನೋಹರ ಗರಸಂಗಿ, ವಿಜಯಕಾಂತ ನೀಲನಾಯಕ, ಪರಶುರಾಮ ನಾರಾಯಣಿ, ಶ್ರವಣ ಖಾತೆದಾರ, ಶ್ರೀಧರ ನೀಲನಾಯಕ, ಬ್ರಹ್ಮಾನಂದ ಕಾಂಬಳೆ, ಕಲಾವತಿ ಬಣಸೋಡೆ, ಸೀತಾದೇವಿ ಗೆಜ್ಜಿಗಡ್ಡಿ ಸೇರಿ ಇನ್ನಿತರರು ಉಪಸ್ಥಿತರಿದ್ದರು.

ವರದಿ : ಅಫ್ತಾಬ ಸರಮುಲ್ಲಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!