ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜನ ಸುರಕ್ಷಾ ಯೋಜನಾ ಕಾರ್ಯಕ್ರಮ

ಮೈಸೂರು : ಹಂಡಿತವಳ್ಳಿ ಗ್ರಾಮ ಪಂಚಾಯಿತಿಯ ಆಶ್ರಯ ಯೋಜನೆಯಲ್ಲಿ ಬ್ಯಾಂಕ್ ಆಫ್ ಬರೋಡಾ ರಾವಂದೂರ್ ಇವರು ಜನ ಸುರಕ್ಷತಾ ಯೋಜನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಮಾನ್ಯ ಪ್ರಧಾನಮಂತ್ರಿ ಸುರಕ್ಷಾ ಯೋಜನೆ ಬಗ್ಗೆ ಅರಿವು ಮತ್ತು ಇರುವ ಯೋಜನೆಗಳ ಬಗ್ಗೆ ಮಾಹಿತಿ ತಿಳಿಸಿ ಜನರಲ್ಲಿ ಜಾಗೃತಿ ಮೂಡಿಸಿ ಜನರಿಗೆ ಹೆಚ್ಚು ಅನುಕೂಲವಾಗುವಂತೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಬ್ಯಾಂಕ್ ಆಫ್ ಬರೋಡಾ ಮ್ಯಾನೇಜರ್ ವಿಠ್ಠಲ್ ರಾಥೋಡ್ ರವರು ವಹಿಸಿಕೊಂಡಿದ್ದರು. ಈ ಕಾರ್ಯಕ್ರಮದ ಯೋಜನೆ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದಂತಹ ಅನಿಲ್ ಕುಮಾರ್ ರವರು ಜನರಿಗೆ ಇದರ ಬಗ್ಗೆ ಮಾಹಿತಿ ಉಪಯುಕ್ತ ಕಾರ್ಯಕ್ರಮಗಳು ಇದರ ಅರಿವು ಸುರಕ್ಷತೆ ಬಗ್ಗೆ ತಿಳಿಸಿದರು, ನಂತರ ಬ್ಯಾಂಕ್ ಆಫ್ ಬರೋಡಾ ಮೈಸೂರು ವಲಯದ ಅಧಿಕಾರಿಗಳಾದ ನಿಶಾಂತ್ ರವರು ಮಾತನಾಡಿ ಬಿ ಎಂ ಜೆ ಬಿ ವೈ ಇದರ ಬಗ್ಗೆ ನಿಮ್ಮ ವಯಸ್ಸಿಗೆ ಅನುಗುಣವಾಗಿ ಯಾವ ಯೋಜನೆಗೆ ಎಷ್ಟು ಹಣ ಸಿಗುತ್ತದೆ ಮತ್ತು ನಾವು ಎಷ್ಟು ಹಣವನ್ನು ನೀಡಬೇಕು ಎಂಬುದರ ಬಗ್ಗೆ ಸಂಕ್ಷಿಪ್ತವಾಗಿ ವಿವರವಾಗಿ ತಿಳಿಸಿದರು ಇದರೊಂದಿಗೆ ಜನರು ಹೆಚ್ಚು ಅನುಕೂಲ ಮಾಡಿಕೊಳ್ಳುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಹಂಡಿತವಳ್ಳಿ ಗ್ರಾಮ ಪಂಚಾಯಿತಿ ಬಿ. ಸಿ ಸಂತೋಷ್ ಕುಮಾರ್ ರವರು ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸ್ವಾಮಿಗೌಡ ಅವರು ಪಂಚಾಯತಿ ಸಿಬ್ಬಂದಿಗಳು ಅಂಗನವಾಡಿ ಕಾರ್ಯಕರ್ತರು ಬ್ಯಾಂಕ್ ಸಿಬ್ಬಂದಿ ಹಾಗೂ ಗ್ರಾಮದ ಯಜಮಾನರು ಮಹಿಳೆಯರು ಹಾಜರಿದ್ದು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ವರದಿ ಹೆಚ್.ಆರ್.ಶಂಕರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!