ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಕಸ್ಮಿಕ ಬೆಂಕಿ ಲಕ್ಷಾಂತರ ಮೌಲ್ಯದ ಗೃಹ ಉಪಯೋಗಿ ವಸ್ತುಗಳು ಬೆಂಕಿಗಾಹುತಿ

ಬಳ್ಳಾರಿ/ ಕಂಪ್ಲಿ : ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅಕಸ್ಮಿಕ ನಡೆದು ಮನೆಯಲ್ಲಿದ್ದ ಗೃಹ ಉಪಯೋಗಿ ವಸ್ತುಗಳು ಆಹಾರ ಸಾಮಗ್ರಿ ನಾಶವಾದ ಘಟನೆ ಕೋಟೆಯಲ್ಲಿ ನಡೆದಿದೆ.

ಸಂಡೂರ್ ರಿಯಾಜ್ ಎಂಬುವರಿಗೆ ಸೇರಿದ ಮನೆ ಬೆಂಕಿಗಾಹುತಿಯಾಗಿದೆ.

ಜುಲೈ 22 ಮಂಗಳವಾರ ಸಾಯಂಕಾಲ ಘಟನೆ ನಡೆದಿದ್ದು ಮನೆಯಲ್ಲಿದ್ದ ಫ್ರಿಡ್ಜ್, ಟಿವಿ, ಆಹಾರ ಸಾಮಾಗ್ರಿ, ಬಟ್ಟೆ ಸೇರಿದಂತೆ ಲಕ್ಷಾಂತರ ಮೌಲ್ಯದ ಗೃಹ ಉಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ.

ಬೆಂಕಿ ಬಿದ್ದ ಸಂದರ್ಭದಲ್ಲಿ ಮನೆಯವರು ಯಾರು ಇರಲಿಲ್ಲ ಎಂದು ತಿಳಿದುಬಂದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಯಪಾಯ ಸಂಭವಿಸಿಲ್ಲ.

ಪ್ರತ್ಯಕ್ಷದರ್ಶಿಗಳು ಸಮಯ ಪ್ರಜ್ಞೆಯನ್ನು ಮೆರೆದು ಬೆಂಕಿಯನ್ನು ನಂದಿಸಿದ್ದಾರೆ.
ಮಾಹಿತಿ ತಿಳಿದ ತಕ್ಷಣ ಜೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ನೆರೆಹೊರೆಯರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಪರಿಹಾರದ ಭರವಸೆಯನ್ನ ನೀಡಿ ಸ್ಥಳ ಪರಿಶೀಲನೆ ಮಾಡಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!