ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿ ತಾಲ್ಲೂಕಿನಲ್ಲಿ ಮುಂದುವರಿದ ಮಳೆ : ದಿನವಿಡೀ ಜಿಟಿ ಜಿಟಿ ಮಳೆಗೆ ಜನ ಸುಸ್ತು

ಬಳ್ಳಾರಿ/ ಕಂಪ್ಲಿ : ಸ್ಥಳೀಯ ಪಟ್ಟಣವೂ ಸೇರಿದಂತೆ ತಾಲ್ಲೂಕಿನಾದ್ಯಂತ ಇಂದು ಮಧ್ಯಾಹ್ನದಿಂದಲೇ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಸಂಜೆಯಾದರೂ ಜಿಟಿ ಜಿಟಿ ಮಳೆ ನಿರಂತರವಾಗಿ ಬರುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದ್ದು, ಪಟ್ಟಣವೂ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಪ್ರಮುಖ ರಸ್ತೆಗಳು ಜನ,ವಾಹನಗಳ ಸಂಚಾರವಿಲ್ಲದೆ ಬಿಕೋ ಎನ್ನುತ್ತಿವೆ.
ತಾಲ್ಲೂಕಿನಲ್ಲಿ ಮಂಗಳವಾರ ಸಂಜೆಯಿಂದ ರಾತ್ರಿಯವರೆಗೂ ನಿರಂತರವಾಗಿ ಮಳೆ ಸುರಿದಿತ್ತು. ಇಂದೂ ಸಹ ಮಧ್ಯಾಹ್ನದಿಂದಲೇ ನಿರಂತರವಾಗಿ ಆಗಾಗ ರಭಸದಿಂದ ಮತ್ತು ಆಗಾಗ ಜಿಟಿ ಜಿಟಿ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಜಿಟಿ ಜಿಟಿ ಮಳೆಯಿಂದಾಗಿ ದೈನಂದಿನ ಕೆಲಸ ಕಾರ್ಯಗಳಿಗೆ ಅಡಚಣೆಯಾಗಿದ್ದು, ಕೃಷಿ ಚಟುವಟಿಕೆಗಳಿಗೂ ತೊಂದರೆಯಾಗಿದೆ.
ಕಾಲುವೆ, ಕೆರೆಗಳಿಗೆ ನೀರನ್ನು ಬಿಟ್ಟಿದ್ದು, ಮಳೆಯೂ ಚೆನ್ನಾಗಿ ಆಗಿದ್ದು, ಕೃಷಿ ಚಟುವಟಿಕೆಗಳು ಭರದಿಂದ ಸಾಗಿದ್ದವು,ಅದರಲ್ಲಿಯೂ ಭತ್ತದ ನಾಟಿ ಕಾರ್ಯ ಬಿರುಸಿನಿಂದ ನಡೆಯುತ್ತಿದ್ದವು. ಆದರೆ ಕಳೆದೆರಡು ದಿನಗಳಿಂದ ಮಧ್ಯಾಹ್ನದಿಂದಲೇ ಮಳೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಗಳಿಗೆ ಹಾಗೂ ಭತ್ತದ ನಾಟಿ ಕಾರ್ಯಕ್ಕೆ ತಂದರೆಯಾಗಿದ್ದು, ಭತ್ತದ ನಾಟಿ ಕಾರ್ಯಕ್ಕೆ ತೆರಳಿದ್ದ ಕೃಷಿ ಕೂಲಿ ಕಾರ್ಮಿಕರು ಅರ್ಧದಲ್ಲಿಯೇ ಮನೆಗೆ ಹಿಂತಿರುಗುತ್ತಿದ್ದು, ಇದರಿಂದ ಜಮೀನಿನ ಮಾಲೀಕರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ತೊಂದರೆಯಾಗಿದೆ. ನಿರಂತರ ಮಳೆಯಿಂದ ಆಗಾಗ ವಿದ್ಯುತ್ ಸಹಿತ ಕೈಕೊಡುತ್ತಿರುವುದು ಸಹಿತ ಜನರಿಗೆ ತೊಂದರೆಯಾಗಿದೆ.
ಸಂಜೆಯಾದರೂ ಮಳೆ ನಿರಂತರವಾದ್ದರಿಂದ ಶಾಲೆ, ಕಾಲೇಜುಗಳಿಗೆ ತೆರಳಿದ್ದ ವಿದ್ಯಾರ್ಥಿಗಳು, ಶಿಕ್ಷಕರು ಸುರಿಯು ಮಳೆಯಲ್ಲಿಯೇ ಮನೆಗಳಿಗೆ ಹಿಂತಿರುಗುತ್ತಿರುವ ದೃಶ್ಯಗಳು ಸಾಮಾನ್ಯವಾಗಿದ್ದವು. ಒಟ್ಟಾರೆ ಎರಡು ದಿನಗಳ ಮಳೆಯಿಂದ ತಾಲ್ಲೂಕಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!