ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂಸ್ಥೆಯಿಂದ ದೊರೆಯುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಿ : ರೇಖಾ

ಬಳ್ಳಾರಿ / ಕಂಪ್ಲಿ : ಗ್ರಾಮದ ಶ್ರೀ ವಿನಾಯಕ ವಿದ್ಯಾನಿಕೇತನ ಶಾಲೆಯಲ್ಲಿ ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ವತಿಯಿಂದ ಮಕ್ಕಳ ಶಿಕ್ಷಣದಲ್ಲಿ ತಾಯಂದಿರ ಪಾತ್ರ ಅರಿವು ಕುರಿತು ಕಾರ್ಯಕ್ರಮ ಜರಗಿತು.
ಈ ವೇಳೆ ಸಮನ್ವಯ ಅಧಿಕಾರಿ ರೇಖಾ ಮಾತನಾಡಿ ಸಂಸ್ಥೆಯು ಹಲವಾರು ಸಾಮಾಜಿಕ ಕಾರ್ಯಗಳ ಮೂಲಕ ಗ್ರಾಮೀಣ ಪ್ರದೇಶದ ಜನರನ್ನು ಮೇಲೆತ್ತುವ ಕೆಲಸ ಮಾಡುತ್ತಿದೆ ಪ್ರತಿಯೊಬ್ಬರೂ ಸಂಸ್ಥೆಯಿಂದ ದೊರೆಯುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಪ್ರಗತಿಯನ್ನು ಹೊಂದಬೇಕು ಎಂದರು.
ನಂತರ ಸಂಪನ್ಮೂಲ ವ್ಯಕ್ತಿ ಶಿಕ್ಷಕ ಎಸ್. ರಾಮಪ್ಪ ಮಾತನಾಡಿ ಮನೆಯ ಮೊದಲ ಪಾಠಶಾಲೆ ಜನನಿ ತಾನೆ ಮೊದಲ ಗುರು ಎನ್ನುವಂತೆ ಮಗುವಿನ ಬೆಳವಣಿಗೆಯಲ್ಲಿ ತಾಯಿ ಪತ್ರ ಬಹಳಷ್ಟು ಮುಖ್ಯವಾಗಿದೆ ಶಿಕ್ಷಣದ ಜೊತೆಗೆ ಮಾನವ ಮೌಲ್ಯಗಳನ್ನು ಬಳಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಅಲ್ಲದೆ ಸಾಮಾಜಿಕ ಜಾಲತಾಣಗಳಿಂದ ಮಕ್ಕಳನ್ನು ದೂರ ಇಡುವ ಮೂಲಕ ಭವಿಷ್ಯದ ಶಿಕ್ಷಣಕ್ಕೆ ಅವರನ್ನು ಅಣಿಗೊಳಿಸುವುದು ತಾಯಂದಿರ ಜೊತೆಗೆ ಸಮಾಜದ ಪ್ರತಿಯೊಬ್ಬರ ಪಾತ್ರ ಬಹುಮುಖ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸುನೀತಾ ಶಿಕ್ಷಕ ಪ್ರಹ್ಲಾದ ರಾವ್, ವೀಣಾ, ಶರಣಬಸವ, ಗಂಗಮ್ಮ, ಜಯಶ್ರೀ, ಸೇರಿದಂತೆ ಮಕ್ಕಳು ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!