ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಾಯಕಯೋಗಿ ಬಸವಣ್ಣನ ಜೀವನ ಶೈಲಿ, ವಚನ ಸಾಹಿತ್ಯ ಎಲ್ಲಾ ಜನಾಂಗದವರು ತಿಳಿಯಬೇಕು : ಪಂಪಾಪತಿ.ಹೆಚ್.

ಕೊಪ್ಪಳ/ ಗಂಗಾವತಿ : ಬಸವಪರ ಸಂಘಟನೆಗಳ ಪರವಾಗಿ ನಗರದಲ್ಲಿ ನಡೆದ ವಚನ ಶ್ರಾವಣ ಕಾರ್ಯಕ್ರಮದಲ್ಲಿ ಕಾಯಕಯೋಗಿ. ಭಕ್ತಿ ಭಂಡಾರಿ ಬಸವಣ್ಣನವರ ವಚನಗಳ ಕುರಿತು ಪಂಪಾಪತಿ.ಹೆಚ್. ಶಿಕ್ಷಕರು ಎಮ್ಮಿಗನೂರು ಉಪನ್ಯಾಸ ನೀಡಿದರು.
ಇಡೀ ಜಗತ್ತು ಗೌರವಿಸುವ ಹಾಗೂ ಎಲ್ಲಾ ಜನಾಂಗದವರು ಒಪ್ಪಿಕೊಳ್ಳುವ ಮಹಾನ್ ಕನ್ನಡದ ವಚನಕಾರರೆಂದರೆ 12ನೇ ಶತಮಾನದ ಸಾಮಾಜಿಕ ಹರಿಕಾರ ಜಗಜ್ಯೋತಿ ಬಸವಣ್ಣನವರು. ಸಮಾಜದಲ್ಲಿದ್ದ ಗೊಡ್ಡು ಸಂಪ್ರಾದಾಯಗಳನ್ನು ಪ್ರಶ್ನಿಸುವ ಮತ್ತು ಪ್ರತಿಭಟಿಸುವ ಗುಣವನ್ನು ಹೊಂದಿದ್ದರು. ಜಾತ್ಯಾತೀತ ಸಮಾಜ ಕಲ್ಪನೆಯನ್ನು ಜಾತಿ ಜಾತಿಗಳ ಹಾಗೂ ಧರ್ಮ ಧರ್ಮಗಳ ಹೆಸರಿನಲ್ಲಿ ನೆಡೆಯುತ್ತಿದ್ದ ಮಾನವ ಸಂಘರ್ಷವನ್ನು ಕುರಿತು ನೊಂದು ನುಡಿದರು.

ಇವನಾರವ ಇವನಾರವ ಇವನಾರವನೆಂದೆನಿಸದಿರಯ್ಯ
ಇವನಮ್ಮವ ಇವನಮ್ಮವನೆಂದೆನಿಸಯ್ಯ ಎನ್ನುವ ಮೂಲಕ ಇಡಿ ವಿಶ್ವಕ್ಕೆ ಸಂದೇಶ ನೀಡಿ. ಮನುಷ್ಯನಾಗಿ ಹುಟ್ಟಿದ ಮೇಲೆ ಇಲ್ಲಿ ಎಲ್ಲಾ ಸಮಾಜ ಹಾಗೂ ಜನಾಂಗದವರನ್ನು ಪ್ರೀತಿಯಿಂದ ಕಾಣಬೇಕು ಎಂಬ ದೊಡ್ಡ ಸಂದೇಶವನ್ನು ನೀಡಿದವರು ಭಕ್ತಿ ಭಂಡಾರಿ ಬಸವಣ್ಣನವರು. ಬಸವಣ್ಣನವರ ಹೋರಾಟ ಇಂದಿನ ಯುವಕರು ತಿಳಿಯಬೇಕು. ಮೂಢನಂಬಿಕೆ, ಕಂದಾಚಾರ, ಸಾಮಾಜಿಕ ಅಸಮಾನತೆ, ಪಕ್ಷಪಾತ, ಇನ್ನೂ ಮುಂತಾದ ಸಾಮಾಜಿಕ ಪಿಡುಗುಗಳ ವಿರುದ್ದ ಬಸವಣ್ಣನವರು ನೆಡೆಸಿದ ಹೋರಾಟ ಆಧುನಿಕ ಭಾರತದ ಯುವ ಜನರಿಗೆ ತಿಳಿಸುವ ಅಗತ್ಯವಿದೆ ಎಂದರು.

ಈ ಸಂದರ್ಭದಲ್ಲಿ ಮಹಾಂತೇಶ ಪಟ್ಟಣಶೆಟ್ಟಿ ಹಾಗೂ ನಾಗರತ್ನ ಪಟ್ಟಣಶೆಟ್ಟಿ ಹಾಗೂ ಬಸವಪರ ಸಂಘಟನೆಗಳ ಎಲ್ಲಾ ಪದಾಧಿಕಾರಿಗಳು ಹಾಗೂ ಎಲ್ಲಾ ಬಸವಣ್ಣನವರ ಅನುಯಾಯಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!