ಚಾಮರಾಜನಗರ/ಹನೂರು :ತಾಲ್ಲೂಕಿನ ಪುಣ್ಯಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ 891ನೇ ಹಡಪದ ಅಪ್ಪಣ್ಣ ಜಯಂತೋತ್ಸವ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕರು ಮಲೆ ಮಹದೇಶ್ವರ ಬೆಟ್ಟದಲ್ಲಿ ಇಡೀ ರಾಜ್ಯದ ಉದ್ದಗಲಕ್ಕೂ ಇರುವಂತಹ ಸವಿತಾ ಸಮಾಜದ ಜನ ಒಂದೆಡೆ ಸೇರಿ ಹಬ್ಬದ ರೀತಿಯಲ್ಲಿ ಅಪ್ಪಣ್ಣ ಜಯಂತಿ ಆಚರಣೆ ಮಾಡುತ್ತಿರುವುದು ಅತ್ಯಂತ ಖುಷಿಯಾದ ಸಂಗತಿಯಾಗಿದೆ, ಅಪ್ಪಣ್ಣ ಜಯಂತಿ ಇಷ್ಟೊಂದು ಅದ್ದೂರಿಯಾಗಿ ನಡೆಯಲು ನಿಮ್ಮಲ್ಲಿರುವ ಉತ್ತಮ ಸಂಘಟನೆ ಗಟ್ಟಿಯಾಗಿದೆ ಎಂದರ್ಥ ಆಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಘಟನೆ ಮಾಡುವ ಮೂಲಕ ಎಲ್ಲರೂ ಒಂದಾಗಿ ಬಾಳಬೇಕು. ಜೊತೆಗೆ ಮಕ್ಕಳನ್ನು ಯಾರು ಸಹ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳಿ ಎಂದರು.
ಪ್ರತಿಭಾ ಪುರಸ್ಕಾರ :
ಎಸ್ ಎಸ್ ಎಲ್ ಸಿ ಹಾಗೂ ಪಿ ಯು ಸಿ ಹಾಗೂ ಪದವಿ ಹಂತದಲ್ಲಿ ಹೆಚ್ಚು ಅಂಕ ಪಡೆದ ಸವಿತಾ ಸಮಾಜದ ಮಕ್ಕಳನ್ನು ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಸಲೂರು ಬೃಹನ್ ಮಠದ ಪೀಠಾಧಿಪತಿಗಳಾದ ಡಾ.ಶಾಂತಮಲ್ಲಿಕಾರ್ಜುನ ಸ್ವಾಮಿಗಳು ,ತಂಗಡಗಿ ಹಡಪದ ಅಪ್ಪಣ್ಣ ದೇವರ ಮಹಾಸಂಸ್ಥಾನ ಮಠದ ಭಾರತಿ ಅಪ್ಪಣ್ಣ ಸ್ವಾಮಿಗಳು, ಸವಿತಾ ಸಮಾಜದ ಚಾ.ನಗರದ ಜಿಲ್ಲಾಧ್ಯಕ್ಷರಾದ ಕೆ.ವಿ ವೆಂಕಟರಾಜು,ಚಾ.ನಗರದ ತಾಲೂಕು ಅಧ್ಯಕ್ಷರಾದ ಬಸವಣ್ಣ ಬದನಗುಪ್ಪೆ, ಗುಂಡ್ಲುಪೇಟೆ ತಾಲ್ಲೂಕು ಅಧ್ಯಕ್ಷ ವಿಠಲ,ಯಳಂದೂರು ತಾ.ಅಧ್ಯಕ್ಷ ಶ್ರೀಕಂಠಸ್ವಾಮಿ,ಕೊಳ್ಳೇಗಾಲ ತಾ.ಅಧ್ಯಕ್ಷ ರಾಚಶೆಟ್ಟಿ,ರಾಮಪುರ ತಾ.ಅಧ್ಯಕ್ಷ ಸಿದ್ದರಾಜು,
ಮಹದೇಶ್ವರ ಬೆಟ್ಟದ ಸವಿತಾ ಸಮಾಜದ ಮಹಿಳಾ ಅಧ್ಯಕ್ಷರಾದ ಸುನಂದ,ಮಲೈ ಮಹದೇಶ್ವರ ಬೆಟ್ಟದ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅರ್ಚನ, ಗ್ರಾಂ ಪಂ ಸದಸ್ಯರಾದ ರತ್ನಮ್ಮ ಹಾಗೂ ಮುಖಂಡರುಗಳಾದ ಡಿ.ಆರ್ ಮಾದೇಶ್,ಜೇಸಿಂ ಪಾಷ,ಗೋಪಾಲ್ ನಾಯಕ,ವಿಜಯ್ ಕುಮಾರ್ ,ಬಸವರಾಜು ಹಾಗೂ ಸಮಾಜದ ಮುಖಂಡರುಗಳು ಉಪಸ್ಥಿತರಿದ್ದರು.
ವರದಿ ಉಸ್ಮಾನ್ ಖಾನ್



















