ಆಳಂದ ತಾಲ್ಲೂಕಿನಲ್ಲಿ ರಾಜಕೀಯ ಹೊಸ ಬಿರುಗಾಳಿ ಅಲ್ಪ ಸಂಖ್ಯಾತ ಸಮುದಾಯದ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.
ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನಲ್ಲಿ ರಾಜಕೀಯ ಹೊಸ ಬಿರುಗಾಳಿಯ ಅಲೆ ಬೀಸಿದ ಘಟನೆಯೊಂದು ನಡೆಯಿತು ಆಡಳಿತ ಪಕ್ಷವಾದ ಕಾಂಗ್ರೆಸ್ ನ ಮುಸ್ಲಿಂ ಮುಖಂಡರು ಹಾಗೂ ಕಾರ್ಯಕರ್ತರು ಬುಧವಾರ ಆಳಂದ ತಾಲೂಕಿನ ಟಿಪ್ಪು ಸುಲ್ತಾನ್ ಚೌಕ್ ನಲ್ಲಿ ತಾಲೂಕಿನ ಮಾಜಿ ಶಾಸಕ ಸುಭಾಷ ಗುತ್ತೇದಾರ ಮತ್ತು ಅವರ ಪುತ್ರರಾದ ಹರ್ಷಾನಂದ ಗುತ್ತೇದಾರ ಅವರ ಸಮ್ಮುಖದಲ್ಲಿ ನೂರಾರು ಮುಸ್ಲಿಂ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದರು.
ಈ ಕಾರ್ಯಕ್ರಮದಲ್ಲಿ ಸಲೀಂ ಜಮಾದಾರ್ ಅವರ ಹುಟ್ಟುಹಬ್ಬವನ್ನು ಸಹಿತ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಅದೇ ರೀತಿಯಾಗಿ ಬಿಜೆಪಿ ನಾಯಕ ಸುಭಾಷ್ ಗುತ್ತೇದರವರ ನೇತೃತ್ವದಲ್ಲಿ ನೂರಕ್ಕೂ ಹೆಚ್ಚು ಮುಸ್ಲಿಂ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರುವುದರ ಮುಖಾಂತರ ರಾಜಕೀಯ ವಲಯದಲ್ಲಿ ಚರ್ಚೆಯ ಕೇಂದ್ರ ಬಿಂದುವಾಗಿದ್ದಾರೆಂದು ಆಳಂದ ತಾಲೂಕಿನ ಸಮಾಜ ಸೇವಕರಾದ ಮಹಿಂದ್ರ ಚಿರಸಾಗರವರು ಪತ್ರಿಕಾ ಮಾಧ್ಯಮದವರಿಗೆ ತಿಳಿಸಿದರು.
- ಕರುನಾಡ ಕಂದ



















