ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಾಧಕನಾಗು…

ಬಿದ್ದಲ್ಲಿಯೇ ಎದ್ದು ನಿಂತು ಗೆಲ್ಲಬೇಕು
ತುಳಿದವರ ಮುಂದೆ ಮೆರೆಯುವ ಸಾಧಕನಾಗಬೇಕು
ಗೊತ್ತೇ ಇಲ್ಲ ಎಂದವರೇ ಗೊತ್ತು ಮಾಡಿಕೊಳ್ಳುವಂತಾಗಬೇಕು
ನಮಗರಿವಿಲ್ಲದಂತೆ ನಾವು ಬೆಳೆದು ಬಾಳಬೇಕು

ಚುಚ್ಚು ಮಾತುಗಳಿಗೆ ಕಿವಿ ಕೊಡದೆ ಮೆಚ್ಚಿ ಬದುಕು
ಬೇಜಾರು ಆಲಸ್ಯತನ ದೂರಕ್ಕೆ ನೂಕು
ಸಾಧಕರ ಸಾಧನೆಗಳ ಮೆಲುಕು ಹಾಕು
ಕರುನಾಡೆ ಒಂದು ದಿನ ನಮ್ಮನ್ನು ಓದಬೇಕು

ಕುಂಟು ನೆಪಗಳೊಂದಿಗೆ ಕಾಲ ಕಳೆಯಬೇಡಿ
ಸುಮ್ಮನೆ ಅನಾಗತ್ಯವಾಗಿ ಸಮಯ ವ್ಯರ್ಥ ಮಾಡಿ
ಕಳೆದು ಹೋದ ದಿನಗಳ ಕುರಿತು ಚಿಂತಿಸಬೇಡಿ
ಪ್ರಯತ್ನಗಳಲ್ಲಿ ಸೋತಿದ್ದೀರಿ ಆದರೆ ಸತ್ತಿಲ್ಲ ನೆನಪಿಡಿ

ಇರುವುದೊಂದೇ ಜನ್ಮ ಪರಿಶ್ರಮ ಹೆಚ್ಚಾಗಲಿ
ನೀವ್ಯಾರು ಎಂಬುದು ಜಗತ್ತಿಗೆ ತಿಳಿಯಲಿ
ಮಾಡುವ ಕೆಲಸ ಕಾರ್ಯಗಳು ಪ್ರಾಮಾಣಿಕವಾಗಿರಲಿ
ಸತ್ತ ಮೇಲೆ ಸ್ಮಶಾನ ಕಣ್ಣೀರಿಡುವಂತಾಗಲಿ

ಮಾಡಿದ ಸಾಧನೆ ಚರಿತ್ರೆಯಲ್ಲಿ ಉಳಿಯಬೇಕಾಗಿದೆ
ಆ ಮಹಾನ್ ಕಾರ್ಯಕ್ಕೆ ತಪಸ್ಸು ಬೇಕಾಗಿದೆ
ಹೆತ್ತವರ ಒಡಲು ಸಂತಸದಿ ಇರಿಸಬೇಕಾಗಿದೆ
ಸಾಧಕರಾಗಿ ಸನ್ಮಾನ ಸಮಾರಂಭಕ್ಕೆ ವೇದಿಕೆ ಸಜ್ಜಾಗಿದೆ

  • ಶ್ರೀ ಮುತ್ತು ಯ.ವಡ್ಡರ, ಶಿಕ್ಷಕರು
    HPS ಹಿರೇಮಳಗಾವಿ, ಬಾಗಲಕೋಟ
    9845568484
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!