ಬಳ್ಳಾರಿ / ಕಂಪ್ಲಿ: ನೂಲು ಹುಣ್ಣಿಮೆಯ ಪ್ರಯುಕ್ತ ಕಂಪ್ಲಿ ಆರಾಧ್ಯ ಶ್ರೀ ನಿಮಿಷಾಂಬ ದೇವಿಯ ಗಂಗೆಸ್ಥಳ ಮೆರವಣಿಗೆ ಸಡಗರ ಸಂಭ್ರಮದಿಂದ ಜರುಗಿತು.
ಇಲ್ಲಿನ ತುಂಗಭದ್ರಾ ನದಿ ತಟದಲ್ಲಿ ಗಂಗೆಪೂಜೆ ಸಲ್ಲಿಸಿದ ನಂತರ ಆರಂಭಗೊಂಡ ಗಂಗೆಸ್ಥಳ ಮೆರವಣಿಗೆ ಸಕಲ ಮಂಗಳವಾದ್ಯದೊಂದಿಗೆ ನಡೆಯಿತು. ಪಟ್ಟಣದ ಪ್ರಮುಖ ರಸ್ತೆಗಳ ಮೂಲಕ ಮೆರವಣಿಗೆ ಸಂಚರಿಸಿ, ದೇವಸ್ಥಾನದ ಸನ್ನಿಧಾನದಲ್ಲಿ ಸಂಪನ್ನಗೊಂಡಿತು. ಭಕ್ತರು ಕಾಯಿ, ಕರ್ಪೂರ, ನೈವೇದ್ಯ ಅರ್ಪಿಸಿ, ದೇವರ ಕೃಪೆಗೆ ಪಾತ್ರರಾದರು.
ಈ ಸಂದರ್ಭದಲ್ಲಿ ಸದ್ಭಕ್ತರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















