ಚಿತ್ರದುರ್ಗ : ನಗರದ ಜಿಲ್ಲಾ ಕುರುಬರ ವಿದ್ಯಾರ್ಥಿನಿಲಯದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಕುರುಬರ ಸಂಘ ಹಾಗೂ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಇವರ ಸಂಯುಕ್ತ ಆಶಯದಲ್ಲಿ ನಡೆದ 12ನೇ ವರ್ಷದ ರಕ್ಷಾಬಂಧನ ಕವಿಗೋಷ್ಠಿ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಎಮ್ಮಿಗನೂರು ಗ್ರಾಮದ ಸರಕಾರಿ ಶತಮಾನ ಶಾಲೆಯ ಗೌರವ ಶಿಕ್ಷಕ ಸಂಪನ್ಮೂಲ ವ್ಯಕ್ತಿ ಎಸ್. ರಾಮಪ್ಪ ಇವರ ಶಿಕ್ಷಣ ಸೇವೆಯನ್ನು ಗುರುತಿಸಿ ಹಾಸ್ಯ ಸಾಹಿತಿ ಜಗನ್ನಾಥ್ ಅವರು ಶಿಕ್ಷಕ ಆಪ್ತಮಿತ್ರ ಶೀರ್ಷಿಕೆಯ ಕವನದ ಭಾವಚಿತ್ರ ನೀಡಿ ಗೌರವಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಚನ್ನಗಿರಿಯ ಕೇದಾರಲಿಂಗ ಶಿವಶಾಂತ ವೀರ ಶಿವಾಚಾರ್ಯರು ಸಾಹಿತಿ ಜಾದು ಮೋಹನ್ ಕುಮಾರ್ ಜಗನ್ನಾಥ್ ನವೀನ್ ಸಜ್ಜನ್ ಮಹಾಂತೇಶ್ ಶಾಸ್ತ್ರಿ ಹಿರೇಮಠ್ ಸೇರಿದಂತೆ ಇತರರು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















