ಬಳ್ಳಾರಿ / ಕಂಪ್ಲಿ : ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ದಿವಂಗತ ಡಾ. ವಿಷ್ಣುವರ್ಧನ್ ಅವರ ಸಮಾಧಿಯನ್ನು ರಾತ್ರೋರಾತ್ರಿ ನೆಲಸಮಗೊಳಿಸಿರುವುದು ತುಂಬಾ ನೋವಿನ ಸಂಗತಿಯಾಗಿದ್ದು ಪ್ರತಿಯೊಬ್ಬ ಕನ್ನಡಿಗರು ಖಂಡಿಸಬೇಕಾಗುತ್ತದೆ.
ರಾಜ್ಯದ ಚಿತ್ರ ರಂಗದ ಇತಿಹಾಸದಲ್ಲಿ ರಾಜಕುಮಾರ್, ವಿಷ್ಣುವರ್ಧನ್ ಅವರು ಜನಮಾನಸದಲ್ಲಿ ಸದಾ ಕಾಲಕ್ಕೂ ಉಳಿದಿರುವ ಮೇರು ನಟರು. ಇವರ ಆದರ್ಶಮಯ ಚಿತ್ರಗಳು ಎಲ್ಲಾ ಕಾಲಕ್ಕೂ ಮಾರ್ಗದರ್ಶಿಯಾಗಿವೆ. ಇಂತಹ ಮೇರು ನಟನ ಸಮಾಧಿಯನ್ನು ರಾತ್ರೋ ರಾತ್ರಿ ನೆಲಸಮ ಮಾಡಿರುವುದು ನಾಡಿನ ಜನರ ಭಾವನೆಯನ್ನು ಘಾಸಿಗೊಳಿಸಿದೆ. ರಾಜ್ಯ ಸರ್ಕಾರ ಸಮಾಧಿ ಸಮಸ್ಯೆಯನ್ನು ಇತ್ಯರ್ಥ ಪಡಿಸಬೇಕು ಎಂದು ಕರವೇ ( ನಾರಾಯಣಗೌಡ ಬಣ) ಕಂಪ್ಲಿ ತಾಲೂಕು ಯುವ ಘಟಕದ ಅಧ್ಯಕ್ಷ ರಾಘವೇಂದ್ರ ಪುಟ್ಟಿ ಆಗ್ರಹಿಸಿದರು.
10 ಗುಂಟೆ ಸಮಾಧಿಗಾಗಿ ಜಾಗವನ್ನು ಖರೀದಿ ಮಾಡಲು ಒಪ್ಪಿರುವ ನಟ ನಿರ್ದೇಶಕ ಸುದೀಪ ರವರಿಗೆ ನಮ್ಮ ಬೆಂಬಲ ಇದೆ ಎಂದು ಇದೆ ಸಂದರ್ಭದಲ್ಲಿ ಬೆಂಬಲ ವ್ಯಕ್ತಪಡಿಸಿದರು.
ವರದಿ : ಜಿಲಾನಸಾಬ್ ಬಡಿಗೇರ್



















