ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುದ್ದಾಪುರ ಗ್ರಾಮದ ಗ್ರಾ. ಪಂ ಕಛೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ

ಬಳ್ಳಾರಿ / ಕಂಪ್ಲಿ: ಕೃಷ್ಣನ ಆದರ್ಶಗಳು ಸದಾ ಅನುಕರಣೀಯವಾಗಿವೆ ಎಂದು ಗ್ರಾ.ಪಂ ಉಪಾಧ್ಯಕ್ಷೆ ಸಾವಿತ್ರಮ್ಮ ಜಡೆ ಮಹಾದೇವ ಅಭಿಪ್ರಾಯ ಪಟ್ಟರು.
ತಾಲೂಕಿನ ನಂ.10 ಮುದ್ದಾಪುರ ಗ್ರಾಮದ ಗ್ರಾ.ಪಂ ಕಛೇರಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಭಾವಚಿತ್ರಕ್ಕೆ ಪೂಜೆ ಮತ್ತು ಪುಷ್ಪ ನಮನ ಸಲ್ಲಿಸಿ ಜಯಂತಿ ಆಚರಿಸಿದ ನಂತರ ಮಾತನಾಡಿ, ಮಹಾಭಾರತ ಹಾಗೂ ಭಗವದ್ಗೀತೆ ನೀಡುವ ಸಂದೇಶವನ್ನು ಎಲ್ಲರೂ ಅರಿತುಕೊಳ್ಳಬೇಕಿದೆ. ಧರ್ಮವನ್ನುಳಿಸುವಲ್ಲಿ ಕೃಷ್ಣನ ಪಾತ್ರ ಮಹತ್ವದ್ದಾಗಿದೆ. ಅಧರ್ಮವನ್ನು ನಾಶಗೊಳಿಸಲು ಕೃಷ್ಣ ಅವತಾರ ಪಡೆದ. ಶ್ರೀಕೃಷ್ಣರನ್ನು ಹಲವು ರೂಪಗಳಲ್ಲಿ ಕಾಣಲಾಗುತ್ತಿದೆ. ಭಕ್ತರು ಆಧ್ಯಾತ್ಮಿಕ ದೃಷ್ಟಿಯಲ್ಲಿ ಆತ ಆರಾಧಕ. ಕವಿಗಳಿಗೆ ಆತ ನಿರಂತರ ಪ್ರೇರಣೆ. ರಾಜಕೀಯ, ಐತಿಹಾಸಿಕವಾಗಿಯೂ ಆತ ಮಾದರಿ. ಒಬ್ಬ ನಿಪುಣ ಆಡಳಿತಗಾರನಾಗಿ ಶ್ರೀ ಕೃಷ್ಣ ಇತಿಹಾಸಕಾರರನ್ನು ಸೆಳೆದಿದ್ದಾನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪಿಡಿಒ ಶಿಲ್ಪಾರಾಣಿ, ಗ್ರಾ.ಪಂ ಅಧ್ಯಕ್ಷೆ ಸೋಮೇಶ್ವರಿ ಪರಶುರಾಮ, ಸದಸ್ಯರಾದ ಡಿ.ಹುಲುಗಪ್ಪ, ಡಿ.ರಾಘವೇಂದ್ರ, ಡಿ.ಹನುಮೇಶ, ಮುಖಂಡರಾದ ಬಳ್ಳಾರಿ ಮಾಧವ, ಜಡೆ ಮಹಾದೇವ ಸೇರಿದಂತೆ ಸಿಬ್ಬಂದಿ ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!