ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಕ್ತದಾನ ಅತ್ಯಂತ ಶ್ರೇಷ್ಠವಾದ ದಾನ

ಕಲಬುರಗಿ :ಎಲ್ಲಾ ದಾನಗಳಿಗಿಂತ ರಕ್ತದಾನ ಅತ್ಯಂತ ಶ್ರೇಷ್ಠ ದಾನವಾಗಿದ್ದು, ರಕ್ತದಾನವು ಹಲವರ ಪ್ರಾಣ ಉಳಿಸಲು ನೆರವಾಗುತ್ತದೆ ಎಂದು ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಗೌರವಾಧ್ಯಕ್ಷರು ಬಸವರಾಜ ಹಡಪದ ಸುಗೂರ .ಎನ್. ಹೇಳಿದರು.

ನಗರದ ಓಲ್ಡ್‌ ಆರ್ ಟಿ ಓ ಆಫೀಸ್ ರಸ್ತೆಯ , ನವಜೀವನ ರಕ್ತ ಸಂಗ್ರಾಹಲಯದಲ್ಲಿ ಹಡಪದ ಅಪ್ಪಣ್ಣ ಸಮಾಜದ ಪದಾಧಿಕಾರಿಗಳು ತುರ್ತುಸ್ಥಿತಿ ಸಂದರ್ಭದಲ್ಲಿ ರಕ್ತದಾನ ದಾನ ನೀಡುವ ಸಂದರ್ಭದಲ್ಲಿ ಮಾತನಾಡಿದರು.

ದೇಶದಲ್ಲಿ ಹಾಗೂ ರಾಜ್ಯದಲ್ಲಿ ಮತ್ತು ನಮ್ಮ ನಗರದಲ್ಲಿ ಪ್ರತಿನಿತ್ಯ ಸಾವಿರಾರು ರೋಗಿಗಳಿಗೆ ರಕ್ತದ ಅವಶ್ಯಕತೆ ತುಂಬಾ ಇದೆ. ಆರೋಗ್ಯವಂತ ಪ್ರತಿಯೊಬ್ಬರು ಯಾವುದೇ ತಪ್ಪು ಕಲ್ಪನೆ ಇಟ್ಟುಕೊಳ್ಳದೆ, ರಕ್ತದಾನ ಮಾಡುವ ಮೂಲಕ ಇತರರ ಪ್ರಾಣ ಉಳಿಸಲು ಮುಂದಾಗಬೇಕು ಎಂದು ಈರಣ್ಣ ಸಿ ಹಡಪದ ಸಣ್ಣೂರ ಕಲಬುರಗಿ ಜಿಲ್ಲಾಧ್ಯಕ್ಷರು ಕಿವಿಮಾತು ಹೇಳಿದರು.
ಅಪಘಾತಕ್ಕೆ ತುತ್ತಾಗಿ ಗಾಯಗೊಂಡವರು ಹಾಗೂ ಇತರೆ ಅನಾರೋಗ್ಯ ಪೀಡಿತರಿಗೆ ತುರ್ತಾಗಿ ರಕ್ತದ ಅವಶ್ಯಕತೆ ಇದ್ದಾಗ ಅವರು ಪಡುವ ಸಂಕಷ್ಟ ಅಷ್ಟಿಷ್ಟಲ್ಲ. ಅಂತವರ ನೋವು, ಕಷ್ಟಗಳನ್ನು ನೋಡಿ ಪ್ರತಿಯೊಬ್ಬರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಹಲವರ ಜೀವ ಉಳಿಸಲು ಸಂಕಲ್ಪ ತೊಡಬೇಕು ಎಂದು ಕಲಬುರಗಿ ಜಿಲ್ಲೆಯ ಕಾರ್ಯಾದ್ಯಕ್ಷರು ಭಗವಂತ ಸಹ ಶಿಕ್ಷಕರು ಹೊನ್ನ ಕಿರಣಗಿ ಹೇಳಿದರು.
ಇದೇ ವೇಳೆ ಕಲಬುರಗಿ ಜಿಲ್ಲೆಯ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ ಹಡಪದ ಬಗದುರಿ ಮತ್ತು ಕಲಬುರಗಿ ಜಿಲ್ಲಾ ಉಪಾಧ್ಯಕ್ಷ ಮಹಾಂತೇಶ ಇಸ್ಲಾಂಪೂರೆ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು.
ಇದೇ ಸಂದರ್ಭದಲ್ಲಿ ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ ಪ್ರದಾನ ಕಾರ್ಯದರ್ಶಿ ರಮೇಶ್ ಹಡಪದ ನೀಲೂರ ಅವರು ಹಾಗೂ ನವ ಜೀವನ ರಕ್ತ ಸಂಗ್ರಾಹಲಯ (ಬ್ಲಡ್‌ ಕ್ಲಬ್ ನ) ವೀರೇಂದ್ರ ವಾಲಿ, ಶಿವಾನಂದ ದೊಡ್ಮನಿ ಸರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು ಎಂದು ಕಲಬುರಗಿ ಜಿಲ್ಲೆಯ ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರು ತಿಳಿಸಿದರು.

  • ಕರುನಾಡ ಕಂದ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!