ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶೇಷ ಚೇತನರು ಬುದ್ದನ ಮಕ್ಕಳು: ಕೆ.ವಿ.ಪ್ರಭಾಕರ್

ಹುಟ್ಟುತ್ತಲೇ ಮನುಷ್ಯ ಜಗತ್ತಿನ‌ ಸಣ್ಣತನಗಳಿಂದ ಮುಕ್ತರಾದವರು: ಕೆ.ವಿ.ಪ್ರಭಾಕರ್

ಬೆಂಗಳೂರು: ಭಿನ್ನ, ವಿಭಿನ್ನ ಸಾಧ್ಯತೆಗಳ ವಿಶೇಷ ಚೇತನರು ಹುಟ್ಟುತ್ತಲೇ ಮನುಷ್ಯ ಜಗತ್ತಿನ‌ ಸಣ್ಣತನಗಳಿಂದ ಮುಕ್ತರಾದವರು. ಹೀಗಾಗಿ ಇವರೆಲ್ಲರೂ ಬುದ್ದನ ಮಕ್ಕಳು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಬಣ್ಣಿಸಿದರು.

ಬಾಲಭವನದಲ್ಲಿ ನಡೆದ “ವಿಶೇಷ ಚೇತನ ಮಕ್ಕಳ ಸ್ವಾತಂತ್ರ್ಯ ದಿನಾಚರಣೆ ಮತ್ತು ಸಾಂಸ್ಕೃತಿಕ ಕಲರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಭಿನ್ನ ಚೇತನರನ್ನು ಸಮಾಜದ ಅಸಹಜ ರೂಢಿಗತ ಕಣ್ಣುಗಳಿಂದ ನೋಡುವುದಕ್ಕಿಂತ ಮನುಷ್ಯ ಸಹಜ ಒಳಗಣ್ಣುಗಳಿಂದ ಗಮನಿಸಬೇಕಿದೆ.

ಈ ಮಕ್ಕಳು ಜೀವನ ಪರ್ಯಂತ ಮಕ್ಕಳಾಗೇ ಇರುತ್ತಾರೆ. ಅಂದರೆ ಮಗುವಿನ ಸಹಜ ನಿಷ್ಕಲ್ಮಷ ಸ್ವಭಾವ ಜೀವನವಿಡೀ ಇರುತ್ತದೆ.

*ಈ ಮಕ್ಕಳು ಸುಳ್ಳು ಹೇಳುವುದಿಲ್ಲ.
*ಈ ಮಕ್ಕಳು ವಂಚಕರಾಗುವುದಿಲ್ಲ.
*ಈ ಮಕ್ಕಳು ಕಳ್ಳರು, ಕೊಲೆಗಾರರಾಗುವುದಿಲ್ಲ.
*ಈ ಮಕ್ಕಳು ಹೊಟ್ಟೆಕಿಚ್ಚು ಪಡುವುದಿಲ್ಲ.
*ಈ ಮಕ್ಕಳು ದುರಾಸೆ ಪಡುವುದಿಲ್ಲ.
*ಈ ಮಕ್ಕಳು ಜಾತಿವಾದಿಗಳಾಗುವುದಿಲ್ಲ.
*ಈ ಮಕ್ಕಳು ಕೋಮುವಾದಿಗಳಾಗುವುದಿಲ್ಲ.

ಹೀಗಾಗಿ ಇವರೆಲ್ಲರೂ ಹುಟ್ಟುತ್ತಲೇ ಉಳಿದ ಮನುಷ್ಯ ಜಗತ್ತು ಆಚರಿಸುವ ಸಣ್ಣತನಗಳಿಂದ ಮುಕ್ತವಾಗಿ ತೊಳೆದ ನೀತಿನಂಥಾ ವ್ಯಕ್ತಿಗಳಾಗುತ್ತಾರೆ.

ಬುದ್ದ ಜೀವಮಾನವಿಡೀ ಮನುಷ್ಯ ಜಗತ್ತನ್ನು ಸಣ್ಣತನಗಳಿಂದ ಮುಕ್ತಿಗೊಳಿಸಲು ಶ್ರಮಿಸಿದ್ದರು. ಅದಕ್ಕೇ ಇವರೆಲ್ಲರೂ ಬುದ್ದನ ಮಕ್ಕಳು. ಹೀಗಾಗಿ ನನಗೆ ಈ ಮಕ್ಕಳ ಬಗ್ಗೆ ಮಾತನಾಡುವುದು ಏನೂ ಇಲ್ಲ.

ಆದರೆ, ಪೋಷಕರ ಜೊತೆ ನನ್ನ ಕೆಲವೊಂದು ಅನಿಸಿಕೆಗಳನ್ನು ಹಂಚಿಕೊಳ್ಳಲು ಬಯಸುತ್ತೇನೆ.

ಇಲ್ಲಿ ಸಂಕಟ ಪಡುತ್ತಿರುವವರು ಮಕ್ಕಳಲ್ಲ. ಮಕ್ಕಳು ತಮ್ಮ ಪಾಡಿಗೆ ತಾವು ಖುಷಿಯಾಗಿದ್ದಾರೆ. ಆದರೆ, ಮಕ್ಕಳ ಬಗ್ಗೆ ಸಂಕಟ ಪಡುತ್ತಾ ಪೋಷಕರು ದುಃಖ ಪಡುತ್ತಿದ್ದಾರೆ. ಈ ದುಃಖಕ್ಕೆ ಮೂಲ ಕಾರಣ ಹೋಲಿಕೆ.

ಇತರೆ ಮಕ್ಕಳಂತೆ ನಮ್ಮ ಮಕ್ಕಳಿಲ್ಲ ಎನ್ನುವ ಹೋಲಿಕೆ. ಈ ಹೋಲಿಕೆಗೆ ಕೊನೆ ಇಲ್ಲ. ಎಲ್ಲಾ ಪೋಷಕರಿಗೂ ತಮ್ಮ ಮಕ್ಕಳನ್ನು ಇತರೆ ಮಕ್ಕಳ ಜೊತೆ ಹೋಲಿಕೆ ಮಾಡುವ ಮಾನಸಿಕ ಸಮಸ್ಯೆ ಇದೆ. ಸಮಾಜದ ರೂಡಿಗತ ಅಭಿಪ್ರಾಯಗಳು ಹೋಲಿಕೆಗೆ ಕಾರಣ. ಹೋಲಿಕೆಗೆ ಬ್ರೇಕ್ ಹಾಕಿದರೆ, ಸಂಕಟಕ್ಕೂ ಬ್ರೇಕ್ ಬೀಳುತ್ತದೆ.

ಹೋಲಿಕೆಯಿಂದ, ಪೋಷಕರು ನರಳಿ, ಇದನ್ನು ನೋಡಿ ಮಕ್ಕಳೂ ನರಳುತ್ತಾರೆ.

ಹೋಲಿಕೆಯಿಂದ ಮೊದಲು ಪೋಷಕರು ಖುಷಿಯಾಗಿರುವ ಸ್ವತಂತ್ರ ಕಳೆದುಕೊಳ್ಳುತ್ತಾರೆ. ಬಳಿಕ , ಮಕ್ಕಳ ಖುಷಿಯ ಸ್ವತಂತ್ರ ಕಿತ್ತುಕೊಳ್ಳುತ್ತಾರೆ ಎಂದರು.

ಭಿನ್ನ ಚೈತನ್ಯದ ಮಕ್ಕಳಿಗೆ ವಿಶೇಷ ಅರ್ಹತೆ ಮತ್ತು ತರಬೇತಿ ಇರುವ ಶಿಕ್ಷಕರು ಬೇಕು ಎನ್ನುವುದೇನೋ ಸರಿ. ಆದರೆ ಸ್ವಾತಂತ್ರ್ಯ ದಿನಾಚರಣೆ, ಸಾಂಸ್ಕೃತಿಕ‌ ಸಡಗರದಂತಹ ಈ ಕಾರ್ಯಕ್ರಮ ಪ್ರತ್ಯೇಕವಾಗಿ ನಡೆಸಬೇಕಿಲ್ಲ. ಉಳಿದ ಮಕ್ಕಳ ಜೊತೆಗೇ, ಉಳಿದ ಪೋಷಕರ ಜೊತೆಗೇ ಆಚರಿಸುವುದು ಅರ್ಥಪೂರ್ಣ ಎಂದುಕೊಳ್ಳುತ್ತೇನೆ.

ಆಗಸ್ಟ್ 15 ರಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ ಪರೇಡ್ ನಲ್ಲಿ ದೃಷ್ಟಿಹೀನ ಮಕ್ಕಳ ತಂಡವೂ ಉಳಿದ ಮಕ್ಕಳ ತಂಡದಷ್ಟೇ ಯಶಸ್ವಿಯಾಗಿ ಭಾಗವಹಿಸಿತ್ತು.

ದೇಶಕ್ಕೆ ಒಲಂಪಿಕ್ ನಲ್ಲಿ, ಕ್ರೀಡೆಗಳಲ್ಲಿ ಅತಿ ಹೆಚ್ಚು ಪದಕ ತರುತ್ತಿರುವುದು ಭಿನ್ನ ಚೈತನ್ಯದ ಪಟುಗಳೇ ಎನ್ನುವುದನ್ನು ಮರೆಯಬಾರದು.

ಹೀಗಾಗಿ ನಾನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳ ಜೊತೆ ಚರ್ಚಿಸುತ್ತೇನೆ. ಮುಂದಿನ ಜನವರಿ 26 ಮತ್ತು ಆಗಸ್ಟ್ 15 ರಂದು ವಿಶೇಷ ಚೇತನ‌ ಮಕ್ಕಳ ತಂಡವೂ ಮಾಣಿಕ್ ಷಾ ಪರೇಡ್ ಮೈದಾನದಲ್ಲೇ ಉಳಿದ ಮಕ್ಕಳ ಜೊತೆ ಪ್ರದರ್ಶನ ನೀಡುವಂತಾಗಲಿ ಎಂದು ಬಯಸುತ್ತೇನೆ ಎಂದರು.

ಬಾಲಭವನ ಅಧ್ಯಕ್ಷರಾದ ಬಿ.ಆರ್.ನಾಯ್ಡು, ನಾರು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ನಟರಾಜ್ ಹಾಗೂ 18 not out ಸರ್ಕಾರೇತರ ಸಂಸ್ಥೆಯ ಮುಖ್ಯಸ್ಥರಾದ ಬಸವರಾಜು ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

300 ಕ್ಕೂ ಹೆಚ್ಚು ಭಿನ್ನ, ವಿಭಿನ್ನ ಚೈತನ್ಯದ ಮಕ್ಕಳು ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.

  • ಕೊಡಕ್ಕಲ್ ಶಿವಪ್ರಸಾದ್.
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!