ಬಳ್ಳಾರಿ / ಕಂಪ್ಲಿ : ಕಂಪ್ಲಿ-ಕೋಟೆಯ 1ನೇ ವಾರ್ಡಿನ ತುಂಗಭದ್ರ ನದಿ ಸೇತುವೆ ಬಳಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಲಿ ಶಾಸಕ ಜೆ.ಎನ್.ಗಣೇಶ ಅವರ ಆಪ್ತ ಸಹಾಯಕ ಧನರಾಜ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದಿಂದ ಶಾಲಾ ಮಕ್ಕಳಿಗೆ ಉಚಿತವಾಗಿ ನೋಟ್ ಬುಕ್, ಪೆನ್ನು, ಪೆನ್ಸಿಲ್ ವಿತರಿಸಿದರು. ನಂತರ ಯುವ ಮುಖಂಡ ಎಸ್.ರುದ್ರಮುನಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ ಜೊತೆಗೆ ಸಾಕಷ್ಟು ಸೌಲಭ್ಯಗಳು ದೊರಕಲಿವೆ. ಇಲ್ಲಿನ ಶಾಲೆಯಲ್ಲಿ ಶಿಕ್ಷಕ ವೃಂದದವರು ಮಕ್ಕಳ ಭವಿಷ್ಯ ರೂಪಿಸಲು ಶ್ರಮಿಸುತ್ತಿದ್ದಾರೆ. ಆದ್ದರಿಂದ ಪೋಷಕರು ಜೊತೆಗೆ ಕಡ್ಡಾಯವಾಗಿ ಮಕ್ಕಳನ್ನು ಶಾಲೆಗೆ ಕಳುಹಿಸಬೇಕು. ಇಲ್ಲಿನ ಶಾಲೆಯಲ್ಲಿ 46 ಮಕ್ಕಳಿಗೆ ನೋಟ್ ಬುಕ್ ಮತ್ತು ಲೇಖನಿ ಸಾಮಾಗ್ರಿಗಳನ್ನು ವಿತರಿಸಿದ್ದು, ಇದರ ಸದುಪಯೋಗದೊಂದಿಗೆ ಮಕ್ಕಳು ಶಿಕ್ಷಣವಂತರಾಗಬೇಕು. ಶಾಸಕರ ಆಪ್ತ ಸಹಾಯಕ ಧನರಾಜ್ ಇವರು ಸಮಾಜಮುಖಿ ಕಾರ್ಯ ಮಾಡುವ ಮೂಲಕ ಜನರೊಂದಿಗೆ ಒಳ್ಳೆಯ ಸಂಪರ್ಕ ಬೆಳೆಸಿಕೊಂಡಿದ್ದು, ಇನ್ನೂ ದೊಡ್ಡ ಮಟ್ಟದಲ್ಲಿ ಬೆಳೆಯಲಿ ಎಂದರು. ಈ ಸಂದರ್ಭದಲ್ಲಿ ಮುಖ್ಯಗುರು ಹೊಸಗೇರಪ್ಪ, ಸಹ ಶಿಕ್ಷಕರಾದ ಚಂದ್ರಶೇಖರ್ ಶೆಟ್ರು, ಸುನೀತಾ, ಎಸ್.ಭವ್ಯ, ಯುವಕರಾದ ವಾಸುಕುಮಾರ, ಬಾಗ್ಲಿ ಮಕ್ಬುಲ್ ಸಾಬ್ ಮಲ್ಲಿಕಾರ್ಜುನ, ಗಜೇಂದ್ರ, ರಾಘವೇಂದ್ರ, ರವಿ ಸೇರಿದಂತೆ ಮಕ್ಕಳು ಪಾಲ್ಗೊಂಡಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















