
ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ದಿನಾಂಕ: 08.08.2025 ರಂದು ಗರ್ಭಿಣಿ ಮಹಿಳೆಯು ಮಗುವಿನ ಜನನದ ನಂತರದ ಅಧಿಕ ರಕ್ತಸ್ರಾವದಿಂದಾಗಿ ಹೆರಿಗೆ ನಂತರದ ಸಮಯದಲ್ಲಿ ಸೂಕ್ಷ್ಮವಾಗಿ ನಿರ್ಣಯ ಹಾಗೂ ಸರಿಯಾದ ರೀತಿಯಲ್ಲಿ ಮೇಲ್ವಿಚಾರಣೆ ಮಾಡದೆ ಸದರಿ ಸಾವು ಸಂಭವಿಸಿದ ಪ್ರಕರಣ ಸಂಬಂಧಿಸಿದಂತೆ ಕರ್ತವ್ಯಲೋಪ, ಕರ್ತವ್ಯ ನಿರ್ಲಕ್ಷ್ಯತನ ಮತ್ತು ಬೇಜಬ್ದಾರಿತನದಿಂದ ನ್ಯಾಯ ಸಮ್ಮತ ಪಕ್ಷಪಾತ ರಹಿತ ವಿಚಾರಣೆ ನಡೆಸಲು ಹಾಗೂ ದಾಖಲೆಗಳನ್ನು ತಿದ್ದುವ, ನಾಶಪಡಿಸುವ ಅಥವಾ ಸಾಕ್ಷಿದಾರರನ್ನು ಪ್ರಭಾವಿತಗೊಳಿಸುವುದನ್ನು ತಡೆಯುವ ಉದ್ದೇಶದಿಂದ ಡಾ. ಇರ್ಷಾನಾ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು, ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಬಸವಕಲ್ಯಾಣ, ಬೀದರ್ ಜಿಲ್ಲೆ ಇವರ ಮೇಲಿನ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿರುವುದರಿಂದ, ಇವರನ್ನು ತಕ್ಷಣದಿಂದ ಅಮಾನತ್ತುಗೊಳಿಸುವುದು ಅತ್ಯಗತ್ಯವಾಗಿದೆ ಎಂದು ಕಂಡುಬಂದು ಆದೇಶಿಸಲಾಗಿದೆ ಎಂದು ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಬೆಂಗಳೂರು ಇವರು ಆದೇಶ ಹೊರಡಿಸಿದ್ದಾರೆ.
ವರದಿ : ಶ್ರೀನಿವಾಸ ಬಿರಾದಾರ



















