ಬೀದರ್/ ಔರಾದ : ಗಣೇಶೋತ್ಸವ ಸಮಿತಿಯ ವತಿಯಿಂದ ನಡೆದ ಪಟ್ಟಣದ ಸಾಮೂಹಿಕ ಗಣೇಶೋತ್ಸವದಲ್ಲಿ ಮಾತಾ ಮಾಣಿಕೇಶ್ವರಿ ಬಡಾವಣೆಯ ಹಿಂದೂ ಮಹಾ ಗಣೇಶ ಮಂಡಳಿ ಪ್ರಥಮ ಬಹುಮಾನವನ್ನು ಗಳಿಸಿದೆ.
ಪ್ರತಿ ವರ್ಷ ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಿ, ಸಾಮಾಜಿಕ ಸಂದೇಶವನ್ನು ಹರಡುತ್ತಿರುವ ಹಿನ್ನೆಲೆಯಲ್ಲಿ ಆಯ್ಕೆ ಸಮಿತಿ ಮಂಡಳಿಗೆ ಈ ಬಾರಿ ಪ್ರಶಸ್ತಿಯನ್ನು ಘೋಷಿಸಿದೆ.
ಮಂಡಳಿಯ ಗೆಲುವಿಗೆ ಕಾರಣರಾದ ಸರ್ವ ಸದಸ್ಯರು, ತಾಲೂಕು ಆಡಳಿತ, ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ನೇರ-ಪರೋಕ್ಷವಾಗಿ ಶ್ರಮಿಸಿದ ಎಲ್ಲರಿಗೂ ಮಂಡಳಿ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದೆ.
ವರದಿ: ಸಾಗರ ಪಡಸಲೆ



















