ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚಂಡಿವಾದ್ಯ ಮೇಳದೊಂದಿಗೆ ವಿಸರ್ಜನೆಗೊಂಡ ಕಂಪ್ಲಿ ಕಾ ಅಧಿಪತಿ ಗಣಪತಿ

ಬಳ್ಳಾರಿ / ಕಂಪ್ಲಿ : ಪಟ್ಟಣದ 5ನೇ ವಾರ್ಡಿನ ಚಂದ್ರಕಲಾ ಚಿತ್ರಮಂದಿರ ಹಿಂಬದಿಯ ರಸ್ತೆ ಬಳಿಯಲ್ಲಿರುವ ಸಾರ್ವಜನಿಕ ಸ್ಥಳದಲ್ಲಿ ಗಜಾನನ ಯುವ ಚೇತನ ಯುವಕರ ಮಂಡಳಿಯಿಂದ ಪ್ರತಿಷ್ಠಾಪಿಸಿದ್ದ ಕಂಪ್ಲಿ ಕಾ ಅಧಿಪತಿ ಪೂರಿ ಜಗನ್ನಾಥ ಗಣಪತಿ ವಿಸರ್ಜನಾ ಕಾರ್ಯಕ್ರಮದಲ್ಲಿ ಭಾನುವಾರ ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಭವ್ಯ ಮೆರವಣಿಗೆ ಅದ್ಧೂರಿಯಾಗಿ ಜರುಗಿತು.
ಇಲ್ಲಿನ ಪ್ರತಿಷ್ಠಾಪನೆಯ ಸ್ಥಳದಿಂದ ಆರಂಭಗೊಂಡ ವಿಸರ್ಜನಾ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಂಸ್ಕೃತಿಕ ಕಲಾ ತಂಡಗಳ ನಡುವೆ ಭವ್ಯ ಮೆರವಣಿಗೆಗೆ ಸಾಕ್ಷಿಯಾಯಿತು. ಮೆರವಣಿಗೆಯುದ್ದಕ್ಕೂ ಮಹಿಳೆಯರು, ಮಕ್ಕಳು ಸೇರಿದಂತೆ ಅನೇಕರು ನಿಂತು ಗಣೇಶನನ್ನು ವೀಕ್ಷಿಸಿದರು.
ಆಗಮಿಸಿದ ಇಲ್ಲಿನ ಮೆರವಣಿಗೆಯಲ್ಲಿ ಕೇರಳ ಹಾಗೂ ಕಾಸರಗೂಡಿನಿಂದ ಚಂಡೆವಾದ್ಯ ಮೇಳದ ಸದ್ದಿಗೆ ಜನರು ನಿಂತಲ್ಲೇ ಕುಣಿಯುವಂತಾಯಿತು. ಶಾಸಕ ಜೆ.ಎನ್.ಗಣೇಶ ಇವರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ತದನಂತರ ಅಂಬೇಡ್ಕರ್ ವೃತ್ತ, ನಡುವಲ ಮ ಮೂಲಕ ಕಂಪ್ಲಿ-ಕೋಟೆಯ ತುಂಗಭದ್ರಾ ನದಿಯಲ್ಲಿ ಗಣಪತಿಯನ್ನು ವಿಸರ್ಜಿಸಿ, ಮತ್ತೊಮ್ಮೆ ಹುಟ್ಟಿ ಬಾ ಎಂದು ಬೇಡಿಕೊಂಡರು.
ಈ ಸಂದರ್ಭದಲ್ಲಿ ಗಜಾನನ ಯುವ ಚೇತನ ಯುವಕರ ಮಂಡಳಿಯವರು ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!