ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಿಬಿರದಿನ್ನಿ ರಸ್ತೆಯನ್ನು ದ್ವಿಮುಖ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸುವಂತೆ ಆಗ್ರಹ

ಬಳ್ಳಾರಿ / ಕಂಪ್ಲಿ : ಪುರಸಭೆಯ ವ್ಯಾಪ್ತಿಯ ಶಿಬಿರದಿನ್ನಿ (ಮಾರುತಿನಗರ) ಮುಖ್ಯರಸ್ತೆಯನ್ನು ದ್ವಿಮುಖ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಬೇಕೆಂದು ಆಗ್ರಹಿಸಿ, ಕರ್ನಾಟಕ ಸೌಹಾರ್ದ ವೇದಿಕೆಯ ರಾಜ್ಯ ಉಪಾಧ್ಯಕ್ಷ ಶಬ್ಬೀರ್ ಹೆಚ್. ನೇತೃತ್ವದಲ್ಲಿ ಪದಾಧಿಕಾರಿಗಳು, ನಿವಾಸಿಗಳು ಪಟ್ಟಣದ ಹೊಸ ಬಸ್ ನಿಲ್ದಾಣ ಬಳಿಯಲ್ಲಿರುವ ಶಿಬಿರದಿನ್ನಿ ರಸ್ತೆ ಬಳಿಯಲ್ಲಿ ಲೋಕೋಪಯೋಗಿ ಇಲಾಖೆಯ ಜೆಇ ಆನಂದ ಇವರಿಗೆ ಗುರುವಾರ ಮನವಿ ಸಲ್ಲಿಸಿದರು.
ನಂತರ ಶಬ್ಬೀರ್ ಮಾತನಾಡಿ, ಕಂಪ್ಲಿ ನಗರದಿಂದ ಶಿಬಿರದಿನ್ನಿ ಮೂಲಕ ನಂ. 10 ಮುದ್ದಾಪುರ ಕ್ರಾಸ್ ವರೆಗೆ ಸುಮಾರು 4 ಕಿ.ಮೀ ಇದ್ದು, ಇಲ್ಲಿನ ಒಟ್ಟಾರೆಯಾಗಿ ಶಿಬಿರದಿನ್ನಿವರೆಗಿನ ಸುಮಾರು 2 ಕಿ.ಮೀ ರಸ್ತೆಯನ್ನು ಸುಮಾರು 4 ಕೋಟಿ ವೆಚ್ಚದಲ್ಲಿ ಏಕಮುಖ ರಸ್ತೆ ಅಭಿವೃದ್ಧಿಗೆ ಮುಂದಾಗಿರುವುದು ಸರಿಯಲ್ಲ. ಇಲ್ಲಿನ ರಸ್ತೆಯನ್ನು ದ್ವಿಮುಖ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಿದರೆ, ಕಂಪ್ಲಿ ನಗರವು ಅಭಿವೃದ್ಧಿ ಹೊಂದಲು ಸಾಧ್ಯ. ಆದರೆ, ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣ ಎಂಬಂತೆ ಶಿಬಿರಿದಿನ್ನಿ ರಸ್ತೆಗೆ ಬರೀ 4 ಕೋಟಿ, ವಾಲ್ಮೀಕಿ ವೃತ್ತದಿಂದ ಬಳ್ಳಾರಿ ರಸ್ತೆಯ ಸ್ವಾಗತ ಕಮಾನ್ ವರೆಗಿನ ರಸ್ತೆಗೆ 6.70 ಕೋಟಿ ಅನುದಾನ ನೀಡುವ ಮೂಲಕ ತಾರತಮ್ಯ ಮಾಡಿರುವುದು ತಿಳಿಯುತ್ತಿದೆ. ಆದ್ದರಿಂದ ಸ್ಥಳೀಯ ಶಾಸಕರು ಕಂಪ್ಲಿ ನಗರ ಅಭಿವೃದ್ಧಿಯ ದೂರದೃಷ್ಟಿಯಿಂದ ಇಲ್ಲಿನ ರಸ್ತೆಯನ್ನು ದ್ವಿಮುಖ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಬೇಕು. ಕಂಪ್ಲಿ ಪುರಸಭೆ ವ್ಯಾಪ್ತಿಯ ರಸ್ತೆ ದ್ವಿಮುಖ ರಸ್ತೆಯಾಗಿ ನಿರ್ಮಾಣವಗಬೇಕು. ರಸ್ತೆಗಳು ಉನ್ನತ ಮಟ್ಟದಲ್ಲಿ ನಿರ್ಮಾಣಗೊಳ್ಳಬೇಕು.
ರಸ್ತೆಗಳಲ್ಲಿ ಬರುವ ಸೇತುವೆಗಳನ್ನು ಹೊಸದಾಗಿ ನಿರ್ಮಿಸಬೇಕು. ರಸ್ತೆ ವಿಭಾಜಕದೊಂದಿಗೆ ಬೀದಿ ದೀಪಗಳನ್ನು ಒಳಗೊಂಡಿರಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಎಂ.ಎಸ್.ಮುನ್ನಾ, ಪಿ. ರಾಘವೇಂದ್ರ, ಎಂ.ರಂಜಿತ್, ಜಾಕೀರ್, ಬಸವರಾಜಗೌಡ, ಎ.ಎಸ್.ಯಲ್ಲಪ್ಪ, ಶಿವುಕುಮಾರ, ಆರ್.ಹೆಚ್.ಧನಂಜಯ್ಯ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!