ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಿಂದೂ ನಾಯಕರಾದ ಮಹೇಶ್ ವಿಕ್ರಮ್ ಹೆಗ್ಡೆ ಮತ್ತು ಪುನೀತ್ ಕೆರೆಹಳ್ಳಿಯವರ ಬಂಧನ ಕಾನೂನು ಬಾಹಿರ; ಇದು ಹಿಂದೂಗಳ ವಾಕ್ ಸ್ವಾತಂತ್ರ್ಯದ ಮೇಲಿನ ಆಕ್ರಮಣ ! – ಹಿಂದೂ ಜನಜಾಗೃತಿ ಸಮಿತಿ

ಬೆಂಗಳೂರು : ವಿಕ್ರಮ ಟಿವಿಯ ಸಂಪಾದಕರು ಮಹೇಶ್ ವಿಕ್ರಮ ಹೆಗಡೆ ಅವರು ಸಾಮಾಜಿಕ ಜಾಲತಾಣ Facebook ಮೂಲಕ ರಾಜ್ಯದಲ್ಲಿ ನಡೆದ ಘಟನೆಗಳ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿರುವುದು ಸಂಪೂರ್ಣವಾಗಿ ಭಾರತೀಯ ಸಂವಿಧಾನದ ಕಲಂ 19(1)(a) – ವಾಕ್ ಮತ್ತು ಅಭಿವ್ಯಕ್ತಿಯ ಸ್ವಾತಂತ್ರ್ಯದ ಹಕ್ಕಿಗೆ ಧಕ್ಕೆ ತರುವ ಕೃತ್ಯವಾಗಿದೆ.

ಅದೇ ರೀತಿ, ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಅಧ್ಯಕ್ಷರಾದ ಪುನೀತ್ ಕೆರೆಹಳ್ಳಿ ಅವರನ್ನು, ಅವರು ಮದ್ದೂರು ಗಣೇಶೋತ್ಸವ ಮೆರವಣಿಗೆಯಲ್ಲಿ ಭಾಗವಹಿಸುತ್ತಾರೆ ಮತ್ತು ಅಲ್ಲಿ “ದ್ವೇಷ ಭಾಷಣ” ಮಾಡುವ ಸಾಧ್ಯತೆ ಇದೆ ಎಂಬ ನೆಪದಲ್ಲಿ ಮುಂಜಾಗ್ರತಾ ಬಂಧನಕ್ಕೆ ಒಳಪಡಿಸಿರುವುದು ಕಾನೂನು ಬಾಹಿರವಾಗಿದೆ.  CRPC ಸೆಕ್ಷನ್ 151 ಅಡಿಯಲ್ಲಿ ಮುಂಜಾಗ್ರತಾ ಬಂಧನವು ಗಂಭೀರ ಅಪರಾಧವನ್ನು ತಡೆಯಲು ಮಾತ್ರ ಅನ್ವಯವಾಗಬೇಕಾದರೆ, ಇಲ್ಲಿ ಯಾವುದೇ ಅಪರಾಧ ನಡೆದಿದೆ ಎಂಬುದು ಸಾಬೀತಾಗಿಲ್ಲ. ಆದ್ದರಿಂದ ಈ ಬಂಧನವು ಅಸಂವಿಧಾನಿಕವಾಗಿದೆ.

ಇಂತಹ ಕ್ರಮಗಳು ಸರ್ಕಾರದ ಪಕ್ಷಪಾತಿ ನಿಲುವನ್ನು ಬಹಿರಂಗಪಡಿಸುತ್ತವೆ. ಗಣೇಶೋತ್ಸವದ ಶಾಂತಿಯುತ ಆಚರಣೆಗಳನ್ನು ಭದ್ರಗೊಳಿಸುವ ಬದಲು, ಹಿಂದೂ ನಾಯಕರನ್ನೇ ಗುರಿಯಾಗಿಸಿ ಬಂಧಿಸುವ ಮೂಲಕ, ಸರ್ಕಾರವು ಹಿಂದೂಗಳ ಧಾರ್ಮಿಕ ಹಕ್ಕು ಮತ್ತು ವಾಕ್ ಸ್ವಾತಂತ್ರ್ಯವನ್ನು ಉಲ್ಲಂಘಿಸಿದೆ. ಹಿಂದೂ ಜನಜಾಗೃತಿ ಸಮಿತಿ ಈ ಅನ್ಯಾಯ ಬಂಧನವನ್ನು ತೀವ್ರವಾಗಿ ಖಂಡಿಸುತ್ತಿದ್ದು, ಸರ್ಕಾರಕ್ಕೆ ಕೆಳಗಿನಂತೆ ಆಗ್ರಹಿಸುತ್ತದೆ:

1. ಮಹೇಶ್ ವಿಕ್ರಮ ಹೆಗಡೆ ಮತ್ತು ಪುನೀತ್ ಕೆರೆಹಳ್ಳಿಯವರ ಬಂಧನವನ್ನು ತಕ್ಷಣವೇ ಹಿಂಪಡೆಯಬೇಕು.

2. ಭವಿಷ್ಯದಲ್ಲಿ ಯಾವುದೇ ಹಿಂದೂ ನಾಯಕ ಅಥವಾ ಧಾರ್ಮಿಕ ಕಾರ್ಯಕ್ರಮಗಳನ್ನು ರಾಜಕೀಯ ಅಥವಾ ಧಾರ್ಮಿಕ ಪಕ್ಷಪಾತದ ಆಧಾರದ ಮೇಲೆ ಗುರಿಯಾಗಿಸುವುದನ್ನು ನಿಲ್ಲಿಸಬೇಕು.

3. ಸಂವಿಧಾನಬದ್ಧ ಹಕ್ಕುಗಳ ರಕ್ಷಣೆಗೆ ಬದ್ಧವಾಗಿರಬೇಕು ಮತ್ತು ರಾಜ್ಯದ ಕಾನೂನು – ಸುವ್ಯವಸ್ಥೆಯನ್ನು ಸಮಾನತೆಯ ಆಧಾರದ ಮೇಲೆ ಪಾಲಿಸಬೇಕು

ಎಂದು ಹಿಂದೂ ಜನಜಾಗೃತಿ ಸಮಿತಿ
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ. ಚಂದ್ರಶೇಖರ ಹೆಬ್ಬಾರ್ ಕೊಲ್ಯ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!