ಬಳ್ಳಾರಿ / ಕಂಪ್ಲಿ : ಪಟ್ಟಣದ ಪೇಟೆ ಬಸವೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರ ದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿವಾನಿ ಮಹಿಳಾ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಹಾಗೂ ಮಹಿಳಾ ಹಕ್ಕುಗಳ ಕುರಿತು ಅರಿವು ಕಾರ್ಯಕ್ರಮ ಜರಗಿತು.
ಯೋಜನಾಧಿಕಾರಿ ರಾಘವೇಂದ್ರ ಕುಮಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ಮಹಿಳೆಯರು ತಮ್ಮ ಮಕ್ಕಳಿಗೆ ಸಂಸ್ಕಾರದ ಜೊತೆಗೆ ಶಿಕ್ಷಣವನ್ನು ನೀಡಿ ಸಮಾಜದಲ್ಲಿ ರೂಪಿಸಬೇಕು ಅಲ್ಲದೆ ಕುಟುಂಬ ನಿರ್ವಹಣೆಯನ್ನು ಸರಿಯಾಗಿ ನಿರ್ವಹಿಸಬೇಕು ಎಂದರು.
ನಂತರ ಶಿಕ್ಷಕ ಸಂಪನ್ಮೂಲ ವ್ಯಕ್ತಿ ಎಸ್ ರಾಮಪ್ಪ ಮಾತನಾಡಿ ಪ್ರತಿಯೊಬ್ಬ ನಾಗರಿಕರು ಮಾನವೀಯ ನೆಲಗಟ್ಟಿನಲ್ಲಿ ಬದುಕಲು ಹಕ್ಕು ಮತ್ತು ಕರ್ತವ್ಯಗಳಿದ್ದು ಮಹಿಳೆಯರು ಶೋಷಣೆಗೆ ದೌರ್ಜನ್ಯಕ್ಕೆ ಒಳಗಾದಾಗ ಎದೆಗುಂದದ ಕಾನೂನಾತ್ಮಕವಾಗಿ ಪರಿಹಾರ ಕಂಡುಕೊಳ್ಳಬೇಕು ಅಲ್ಲದೆ ರಾಜಕೀಯ ಸಾಮಾಜಿಕ ಶೈಕ್ಷಣಿಕ ಆರ್ಥಿಕವಾಗಿ ಹಲವಾರು ಅವಕಾಶಗಳನ್ನು ನೀಡಿದ್ದು ಬಳಕೆ ಮಾಡಿಕೊಂಡು ಮೇಲೆ ಬರಬೇಕು ಎಂದರು.
ಈ ಸಂದರ್ಭದಲ್ಲಿ ಸಮನ್ವಯ ಅಧಿಕಾರಿ ರೇಖಾ ಕೇಂದ್ರದ ಅಧ್ಯಕ್ಷರಾದ ನಿರ್ಮಲ ಸೇರಿದಂತೆ ಇತರರು ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್



















