ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹೊಸ ದರೋಜಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 7.20.ಲಕ್ಷ ರೂ ನಿವ್ವಳ ಲಾಭ ಗಳಿಸಿದೆ : ಡಿ.ವಿ.ಮಂಜುನಾಥ

ಬಳ್ಳಾರಿ/ ಕಂಪ್ಲಿ : ಹೊಸದರೋಜಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2022-23ನೇ ಸಾಲಿನಲ್ಲಿ 7.20.561.ರೂಗಳ ನಿವ್ವಳ ಲಾಭಗಳಿಸಿದೆ ಎಂದು ಸಹಕಾರಿ ಸಂಘದ ಅಧ್ಯಕ್ಷ ಡಿ. ವಿ. ಮಂಜುನಾಥ ಹೇಳಿದರು.
ಸಮೀಪದ ಹೊಸ ದರೋಜಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಛೇರಿ ಆವರಣದಲ್ಲಿ ಶನಿವಾರ ನಡೆದ ವಾರ್ಷಿಕ ಮಹಾಜನ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಈ ಸಂಘವು 4390 ಸದಸ್ಯರನ್ನು ಒಳಗೊಂಡಿದ್ದು, 104.09 ಕೋಟಿ ರೂ.ಗಳ ಠೇವಣಿ ಸಂಗ್ರಹಿಸಿದೆ. ಕೆಸಿಸಿ, ಮಧ್ಯಮಾವಧಿ, ಬಿಡಿಸಿಸಿ,ಮೀನು ಸಾಕಾಣಿಕೆ ಸಾಲ ಸೇರಿದಂತೆ ಸುಮಾರು 708.06. ಕೋಟಿ ಸಾಲ ವಿತರಿಸಿದೆ. ಸಂಘವು ಸರ್ವ ಸದಸ್ಯರ ಹಾಗೂ ಗ್ರಾಮದ ಮುಖಂಡರ ಮತ್ತು ಜನಪ್ರತಿನಿಧಿಗಳ ಸಹಕಾರದಿಂದ ಅಭಿವೃದ್ಧಿ ಕಾಣುತ್ತಿದೆ ಎಂದರು.
ಸಭೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿ.ಮಲ್ಲಿಕಾರ್ಜುನ ಅವರು ಲೆಕ್ಕ ಪತ್ರ, ಆಡಿಟ್ ವರದಿ ಮಂಡಿಸಿದರು. ಸಂಘವು ಲೆಕ್ಕ ಪರಿಶೋಧನೆಯಲ್ಲಿ “ಎ” ಶ್ರೇಣಿಯನ್ನು ಪಡೆದಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ವಲಿ ಮಸೀದಿ, ನಿರ್ದೇಶಕರಾದ ಪಿ.ಎಸ್.ಲಿಂಗಪ್ಪ, ಕೆ.ರಾಮಾಂಜಿನೇಯ, ವೆಂಕಟೇಶ್ ಸಾಲುಮನೆ, ಶ್ರೀನಿವಾಸ.ಡಿ., ದಾನಪ್ಪ ಎಚ್., ತಿಮ್ಮಯ್ಯ.ಕೆ. ಯರ‍್ರಿಸ್ವಾಮಿ ನಾಯಕರು, ಶೋಭಾದೇವಿ ವಿ.ಟಿ., ನಾಗಮ್ಮ, ಎನ್.ವಿ. ಹನುಮಂತ, ರವಿಪ್ರಕಾಶ್.ಎ., ಮುಖಂಡರಾದ ಮಾದಾಪುರ ಮಾರೆಪ್ಪ, ವಿ.ಭೀಮಪ್ಪ, ವಿ.ಕಾಳಪ್ಪ, ಕೆ.ಈರಣ್ಣ, ವಿ.ಹನುಮಂತಪ್ಪ, ಎನ್.ವಿ.ಷಣ್ಮುಖಪ್ಪ, ಕೆ.ಅಂಬಣ್ಣ,ಡಿ. ರಾಮಾಂಜನೇಯ ಸೇರಿದಂತೆ ಗ್ರಾಮದ ಮುಖಂಡರು ಹಮಾಲಿ ಸಂಘದ ಸದಸ್ಯರು ಹಾಗೂ ಸಂಘದ ಸಿಬ್ಬಂದಿ,ರೈತರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!